ಬಸ್ ಗ್ಯಾರೇಜ್ ನಲ್ಲಿ ಬೆಂಕಿ ಅವಘಡ 
ರಾಜ್ಯ

ಬೆಂಗಳೂರು ಬಸ್ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಬಸ್ ಭಸ್ಮ, ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಬೆಂಗಳೂರಿನ ಬಸ್ ಗ್ಯಾರೇಜ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರಿನ ಬಸ್ ಗ್ಯಾರೇಜ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ (Bengaluru fire)ದಲ್ಲಿ 20ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK ShivaKumar) ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರನಗರದ ಸಮೀಪದಲ್ಲಿರುವ SV ಕೋಚ್ ಬಸ್ ಬಾಡಿಬಿಲ್ಡರ್ಸ್ ಮತ್ತು ಗ್ಯಾರೇಜ್ ನಲ್ಲಿ ಇಂದು  ಬೆಳಗ್ಗೆ ಭಾರೀ ಬೆಂಕಿ (Bus Fire) ಕಾಣಿಸಿಕೊಂಡು ನಿಂತಿದ್ದ 20ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಕರಕಲಾಗಿವೆ. ಗ್ಯಾರೇಜ್‌ನಲ್ಲಿ ನಿಂತಿದ್ದ ಬಸ್‌ ಒಂದರ ಭಾಗಕ್ಕೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ವೆಲ್ಡಿಂಗ್ ಯಂತ್ರದಿಂದ ಕಿಡಿ ಹಾರಿದ್ದು ಇದು ಬೆಂಕಿ ಅವಘಡಕ್ಕೆ ಕಾರಣವಾಯಿತು. ಬಳಿಕ ಒಂದರನಂತರ ಒಂದು ಬಸ್ ಗೆ ಬೆಂಕಿ ವ್ಯಾಪಿಸಿದೆ ಎಂದು ನಾವು ಶಂಕಿಸಿದ್ದೇವೆ. ಬೆಂಕಿ ನಂತರ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಇತರ ಬಸ್‌ಗಳಿಗೆ ಹರಡಿ ಭಾರೀ ಹಾನಿಯನ್ನುಂಟುಮಾಡಿತು" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ನಿಯೋಜಿಸಲಾಗಿತ್ತು. ಸುಮಾರು 18 ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಮತ್ತು ನಾಲ್ಕು ಭಾಗಶಃ ಹಾನಿಗೊಳಗಾಗಿವೆ. ಗ್ಯಾರೇಜ್‌ನಲ್ಲಿ 35 ಬಸ್‌ಗಳಿದ್ದವು. ಈ ಪೈಕಿ 20ಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಗ್ಯಾರೇಜ್ ಅನ್ನು ತೆರೆದ ಜಾಗದಲ್ಲಿ ಇರಿಸಲಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಾಗ ಅದರಲ್ಲಿದ್ದ ಜನರು ಬೇಗನೆ ಹೊರಬರಲು ಸಾಧ್ಯವಾಯಿತು. ಇದರಿಂದ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಬೆಂಕಿಯಲ್ಲಿ ಯಾರೂ ಗಾಯಗೊಂಡಿಲ್ಲ, ಬೆಂಕಿಯ ನಿಖರವಾದ ಕಾರಣವನ್ನು ತನಿಖೆ ಮಾಡಲು ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಭೇಟಿ
ಇನ್ನು ದುರಂತ ನಡೆದ ಗ್ಯಾರೇಜ್ ಗೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ ಆಧಿಕಾರಿಗಳೊಂದಿಗೆ ಘಟನೆಯ ಕುರಿತು ಮಾಹಿತಿ ಪಡೆದು, ಬಸ್ ಮಾಲೀಕರೊಂದಿಗೆ ನಷ್ಟದ ಕುರಿತು ಮಾಹಿತಿ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

Madhya Pradesh: 'ದುರ್ಗಾದೇವಿ ಮೂರ್ತಿ' ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಉರುಳಿ 10 ಮಂದಿ ದಾರುಣ ಸಾವು! Video

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

SCROLL FOR NEXT