ಬಸ್ ಗ್ಯಾರೇಜ್ ನಲ್ಲಿ ಬೆಂಕಿ ಅವಘಡ 
ರಾಜ್ಯ

ಬೆಂಗಳೂರು ಬಸ್ ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಬಸ್ ಭಸ್ಮ, ಡಿಸಿಎಂ ಡಿಕೆಶಿ, ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಬೆಂಗಳೂರಿನ ಬಸ್ ಗ್ಯಾರೇಜ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರಿನ ಬಸ್ ಗ್ಯಾರೇಜ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ (Bengaluru fire)ದಲ್ಲಿ 20ಕ್ಕೂ ಹೆಚ್ಚು ಬಸ್ ಗಳು ಬೆಂಕಿಗಾಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK ShivaKumar) ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರಿನ ಹೊಸಕೆರೆಹಳ್ಳಿಯ ವೀರಭದ್ರನಗರದ ಸಮೀಪದಲ್ಲಿರುವ SV ಕೋಚ್ ಬಸ್ ಬಾಡಿಬಿಲ್ಡರ್ಸ್ ಮತ್ತು ಗ್ಯಾರೇಜ್ ನಲ್ಲಿ ಇಂದು  ಬೆಳಗ್ಗೆ ಭಾರೀ ಬೆಂಕಿ (Bus Fire) ಕಾಣಿಸಿಕೊಂಡು ನಿಂತಿದ್ದ 20ಕ್ಕೂ ಹೆಚ್ಚು ಬಸ್‌ಗಳು ಸುಟ್ಟು ಕರಕಲಾಗಿವೆ. ಗ್ಯಾರೇಜ್‌ನಲ್ಲಿ ನಿಂತಿದ್ದ ಬಸ್‌ ಒಂದರ ಭಾಗಕ್ಕೆ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ವೆಲ್ಡಿಂಗ್ ಯಂತ್ರದಿಂದ ಕಿಡಿ ಹಾರಿದ್ದು ಇದು ಬೆಂಕಿ ಅವಘಡಕ್ಕೆ ಕಾರಣವಾಯಿತು. ಬಳಿಕ ಒಂದರನಂತರ ಒಂದು ಬಸ್ ಗೆ ಬೆಂಕಿ ವ್ಯಾಪಿಸಿದೆ ಎಂದು ನಾವು ಶಂಕಿಸಿದ್ದೇವೆ. ಬೆಂಕಿ ನಂತರ ಗ್ಯಾರೇಜ್‌ನಲ್ಲಿ ನಿಲ್ಲಿಸಲಾಗಿದ್ದ ಇತರ ಬಸ್‌ಗಳಿಗೆ ಹರಡಿ ಭಾರೀ ಹಾನಿಯನ್ನುಂಟುಮಾಡಿತು" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳನ್ನು ಸೇವೆಗೆ ನಿಯೋಜಿಸಲಾಗಿತ್ತು. ಸುಮಾರು 18 ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಮತ್ತು ನಾಲ್ಕು ಭಾಗಶಃ ಹಾನಿಗೊಳಗಾಗಿವೆ. ಗ್ಯಾರೇಜ್‌ನಲ್ಲಿ 35 ಬಸ್‌ಗಳಿದ್ದವು. ಈ ಪೈಕಿ 20ಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಗ್ಯಾರೇಜ್ ಅನ್ನು ತೆರೆದ ಜಾಗದಲ್ಲಿ ಇರಿಸಲಾಗಿದ್ದರಿಂದ ಬೆಂಕಿ ಕಾಣಿಸಿಕೊಂಡಾಗ ಅದರಲ್ಲಿದ್ದ ಜನರು ಬೇಗನೆ ಹೊರಬರಲು ಸಾಧ್ಯವಾಯಿತು. ಇದರಿಂದ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಬೆಂಕಿಯಲ್ಲಿ ಯಾರೂ ಗಾಯಗೊಂಡಿಲ್ಲ, ಬೆಂಕಿಯ ನಿಖರವಾದ ಕಾರಣವನ್ನು ತನಿಖೆ ಮಾಡಲು ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ರಾಮಲಿಂಗಾ ರೆಡ್ಡಿ ಭೇಟಿ
ಇನ್ನು ದುರಂತ ನಡೆದ ಗ್ಯಾರೇಜ್ ಗೆ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ ಆಧಿಕಾರಿಗಳೊಂದಿಗೆ ಘಟನೆಯ ಕುರಿತು ಮಾಹಿತಿ ಪಡೆದು, ಬಸ್ ಮಾಲೀಕರೊಂದಿಗೆ ನಷ್ಟದ ಕುರಿತು ಮಾಹಿತಿ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ