ಸಾಂದರ್ಭಿಕ ಚಿತ್ರ 
ರಾಜ್ಯ

ನವೆಂಬರ್ 2 ರಂದು 15 ಸದಸ್ಯರ SEP ಸಮಿತಿಯ ಮೊದಲ ಸಭೆ

ರಾಜ್ಯ ಶಿಕ್ಷಣ ನೀತಿಯ(ಎಸ್‌ಇಪಿ) ರೂಪಿಸಲು ರಾಜ್ಯ ಸರ್ಕಾರ ರಚಿಸಿರುವ 15 ಸದಸ್ಯರ ಸಮಿತಿಯು ನವೆಂಬರ್ 2 ರಂದು ತನ್ನ ಚೊಚ್ಚಲ ಸಭೆ ನಡೆಸಲಿದೆ.

ಬೆಂಗಳೂರು: ರಾಜ್ಯ ಶಿಕ್ಷಣ ನೀತಿಯ(ಎಸ್‌ಇಪಿ) ರೂಪಿಸಲು ರಾಜ್ಯ ಸರ್ಕಾರ ರಚಿಸಿರುವ 15 ಸದಸ್ಯರ ಸಮಿತಿಯು ನವೆಂಬರ್ 2 ರಂದು ತನ್ನ ಚೊಚ್ಚಲ ಸಭೆ ನಡೆಸಲಿದೆ.

ನವೆಂಬರ್ 3 ರಂದು ಎಂಟು ಸದಸ್ಯರ ತಜ್ಞರು/ಸಲಹೆಗಾರರ ಸಮಿತಿಯ ಸಭೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

“ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಇಲಾಖೆಯ ಸದಸ್ಯರೊಂದಿಗೆ ಉಪ ಸಮಿತಿಗಳನ್ನು ರಚಿಸುವುದು ಸಭೆಯ ಪ್ರಮುಖ ಕಾರ್ಯಸೂಚಿಗಳಲ್ಲಿ ಒಂದಾಗಿದೆ. ಏಕೆಂದರೆ ಯಾವುದೇ ಸರ್ಕಾರಿ ಅಧಿಕಾರಿಗಳನ್ನು ಸಮಿತಿಗೆ ಸದಸ್ಯರನ್ನಾಗಿ ನೇಮಿಸಿಲ್ಲ. ಉಪ ಸಮಿತಿಗಳ ನಿಯಮಗಳು ಮತ್ತು ಷರತ್ತುಗಳನ್ನು ಸಹ ಚರ್ಚಿಸಲಾಗುವುದು. ಸಮಿತಿಗಳ ಕಾರ್ಯವನ್ನು ಇನ್ನೂ ನಿರ್ಧರಿಸಲಾಗಿಲ್ಲ” ಎಂದು ಮೂಲಗಳು ತಿಳಿಸಿವೆ.

ರಚಿಸಲಾಗುವ ಉಪಸಮಿತಿಗಳಿಗೆ ವರದಿ ಸಿದ್ಧಪಡಿಸಲು ಮತ್ತು ವರದಿ ಸಲ್ಲಿಸಲು ಗಡುವು ನೀಡಲಾಗುವುದು. 15 ಸದಸ್ಯರ ಸಮಿತಿ ಸದಸ್ಯರು ರಾಜ್ಯ ಶಿಕ್ಷಣ ನೀತಿ ಆಯೋಗದ ಕಾರ್ಯಗಳ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಶಿಕ್ಷಣ ನೀತಿ ಪರಿಚಯಸಲು ಸಮಯ ತೆಗೆದುಕೊಳ್ಳುತ್ತದೆ. ಎಸ್ ಇಪಿ ಅಂತಿಮಗೊಳಿಸಿದ ನಂತರವೇ ಅಧ್ಯಾಯಗಳನ್ನು ಸೇರಿಸಲಾಗುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಯಲ್ಲಿರುವಂತೆ ಸಮಿತಿಯ ಪ್ರತಿ ಸದಸ್ಯರಿಗೂ ಒಂದೊಂದು ವಿಷಯವನ್ನು ನಿರ್ವಹಿಸಲು ಸೂಚಿಸಲಾಗುತ್ತದೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧರವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ 15 ಸದಸ್ಯರ ಸಮಿತಿ ರಚಿಸಿ ಆದೇಶ ಹೊರಡಿಸಿದ್ದಾರೆ. ಸದಸ್ಯ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ಡಾ.ಭಾಗ್ಯವಾನ ಎಸ್.ಮುದಿಗೌಡ್ರ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT