ಸಾಂದರ್ಭಿಕ ಚಿತ್ರ 
ರಾಜ್ಯ

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೆ ವಿಸ್ತರಿಸಿ: ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬೆಂಗಳೂರು: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ ಧಾರವಾಡದವರೆಗೆ ಇರುವ ವಂದೇ ಭಾರತ್ ರೈಲು ಸಂಪರ್ಕವನ್ನು ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ವಂದೇ ಭಾರತ್ ರೈಲು ಸಂಪರ್ಕ ವಿಸ್ತರಣೆಯಿಂದ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ತನಕ ವಿಸ್ತರಣೆ ಮಾಡಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೂ ಉತ್ತಮ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ. ಹೀಗಾಗಿ ವಂದೇ ಭಾರತ್ ರೈಲು ಸಂಪರ್ಕವನ್ನು ಹುಬ್ಬಳ್ಳಿ – ಧಾರವಾಡದಿಂದ ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT