ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ 
ರಾಜ್ಯ

ಎಫ್‌ಡಿಎ ಪರೀಕ್ಷೆ ಹಗರಣ: ಪ್ರಿಯಾಂಕ್ ಖರ್ಗೆ ಮೂಗಿನಡಿಯಲ್ಲಿ ಅಕ್ರಮ ನಡೆದಿದೆ; ಬಿಜೆಪಿ ಆರೋಪ

ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಸರ್ಕಾರ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು: ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಸರ್ಕಾರ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು, ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಜೊತೆಗೆ ಪ್ರಿಯಾಂಕ್ ಖರ್ಗೆಯೂ ಶಾಮೀಲಾಗಿದ್ದಾರೆಂದು ಆರೋಪಿಸಿದ್ದಾರೆ.

ರುದ್ರಗೌಡ ಪಾಟೀಲ್​​ ಜಮೀನು​ ಮೇಲೆ ಬಂದು ಮತ್ತೆ ಅಕ್ರಮವೆಸಗಿದ್ದಾನೆ. ಪಾಟೀಲ್ ಪರೀಕ್ಷಾ ಅಕ್ರಮ ನಡೆಸುವುದನ್ನು ಈತ ಹವ್ಯಾಸ‌ ಮಾಡಿಕೊಂಡಿದ್ದಾನೆ. ಅಕ್ರಮದ ಮಾಹಿತಿ ಬಂತು ಎಂದು ಪರೀಕ್ಷೆ ತಡೆದಿರುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅವರಿಗೇನೂ ಮಾಹಿತಿ ಬಂದಿಲ್ಲ. ಆದರೆ, ರುದ್ರಗೌಡ ಪಾಟೀಲ್​ನ ಅಕ್ರಮಕ್ಕೆ ಸರ್ಕಾರದ ಕುಮ್ಮಕ್ಕು, ಸಹಕಾರ ಇದೆ. ಈ ಸರ್ಕಾರದಲ್ಲಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಮೋಸ ಆಗುತ್ತಿದೆ. ಕೆಇಎ ಪರೀಕ್ಷಾ ಅಕ್ರಮ ಹೊಣೆಯನ್ನು ಸಚಿವರೇ ಹೊತ್ತುಕೊಳ್ಳಬೇಕು. ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ಅವರು ಮಾತನಾಡಿ, ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.

ಪಾಟೀಲ್ ಸೇರಿದಂತೆ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.

‘ಅಧಿಕಾರಿಗಳು, ಸಚಿವರ ಸಹಕಾರವಿಲ್ಲದೆ ಅಕ್ರಮ ನಡೆಯುವುದಿಲ್ಲ, ಎಫ್‌ಡಿಎ ಪರೀಕ್ಷೆಯಲ್ಲಿ 20 ಮಂದಿಗೆ ಕೆಇಎ ಒಂದು ಗಂಟೆ ಹೆಚ್ಚುವರಿ ಸಮಯ ನೀಡಿದ್ದು ಏಕೆ? ಇದೂವರೆಗೆ ಒಂಬತ್ತು ಮಂದಿಯನ್ನು ಮಾತ್ರ ಬಂಧಿಸಲಾಗಿದೆ. ಪಾಟೀಲ್ ಅವರನ್ನು ಇನ್ನೂ ಏಕೆ ಎತ್ತಂಗಡಿ ಮಾಡಿಲ್ಲ? ಅದಕ್ಕೆ ಕಾರಣ ಅವರು ನಿಮ್ಮ ಪಕ್ಷದ ಕಾರ್ಯಕರ್ತನಾಗಿರುವುದು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT