ಚಿರತೆ ಪ್ರತ್ಯಕ್ಷ 
ರಾಜ್ಯ

ಬೆಂಗಳೂರು: ತಪ್ಪಿಸಿಕೊಂಡ ಚಿರತೆ ಸೆರೆ ಹಿಡಿಯಲು ಐದು ತಂಡ ನಿಯೋಜನೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಕಾಣಿಸಿಕೊಂಡ ಮೂರು ದಿನಗಳ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಹಿಡಿಯಲು ಐದು ತಂಡಗಳನ್ನು ನಿಯೋಜಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಕಾಣಿಸಿಕೊಂಡ ಮೂರು ದಿನಗಳ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಹಿಡಿಯಲು ಐದು ತಂಡಗಳನ್ನು ನಿಯೋಜಿಸಿದ್ದಾರೆ.

ಸೋಮವಾರವೂ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು.

ಅರಣ್ಯಾಧಿಕಾರಿಗಳ ಪ್ರಕಾರ, ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಂದಿನಿಂದ ಚಿರತೆ ಕಾಣಿಸಿಕೊಂಡಿಲ್ಲ.

ನಮ್ಮ ಬಳಿ ಇರುವುದು ಸಿಸಿಟಿವಿ ದೃಶ್ಯಾವಳಿಗಳು ಮಾತ್ರ. ಹೀಗಾಗಿ ಚಿರತೆ ಸೆರೆಗೆ ಐದು ತಂಡಗಳನ್ನು ರಚಿಸಿದ್ದು, ಈ ತಂಡಗಳನ್ನು 10 ಎಕರೆ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಬೆಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು ಹೇಳಿದ್ದಾರೆ.

ಚಿರತೆ ಕಾಣಿಸಿಕೊಂಡ ಸ್ಥಳವು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ(ಬಿಎನ್‌ಪಿ) ಸುಮಾರು 8 ಕಿಮೀ ದೂರದಲ್ಲಿದೆ. ಚಿರತೆ ಬೇಟೆಯನ್ನು ಹುಡುಕಿಕೊಂಡು ಉದ್ಯಾನವನದಿಂದ ಹೊರಗೆ ಬಂದಿರುವ ಸಾಧ್ಯತೆ ಇದೆ. ಅದರ ನಂತರ ಉದ್ಯಾನವನಕ್ಕೆ ಹಿಂತಿರುಗಿರಬಹುದು ಎಂದು ಅವರು ತಿಳಿಸಿದ್ದಾರೆ.

ಚಿರತೆ ಕಾಣಿಸಿಕೊಂಡ ಸ್ಥಳದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪಶುವೈದ್ಯರ ತಂಡವನ್ನು ಕೂಡ ನಿಯೋಜಿಸಲಾಗಿದೆ. ಇದು ಗಂಡು ಚಿರತೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. "ಆದಾಗ್ಯೂ, ಚಿರತೆಯ ವಯಸ್ಸನ್ನು ಕಂಡುಹಿಡಿಯಲಾಗಲಿಲ್ಲ" ಎಂದು ಅವರು ಹೇಳಿದ್ದಾರೆ.

ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ವಾಸಿಸುವ ಜನರು ರಾತ್ರಿ ವೇಳೆ ಹೊರಗೆ ಹೋಗದಂತೆ ಮತ್ತು ಯಾವುದೇ ತುರ್ತು ಸಂದರ್ಭದಲ್ಲಿ 1926 ಗೆ ಡಯಲ್ ಮಾಡುವಂತೆ ಅರಣ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!