ಚಿರತೆ ಪ್ರತ್ಯಕ್ಷ 
ರಾಜ್ಯ

ಬೆಂಗಳೂರು: ತಪ್ಪಿಸಿಕೊಂಡ ಚಿರತೆ ಸೆರೆ ಹಿಡಿಯಲು ಐದು ತಂಡ ನಿಯೋಜನೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಕಾಣಿಸಿಕೊಂಡ ಮೂರು ದಿನಗಳ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಹಿಡಿಯಲು ಐದು ತಂಡಗಳನ್ನು ನಿಯೋಜಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಚಿರತೆ ಕಾಣಿಸಿಕೊಂಡ ಮೂರು ದಿನಗಳ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಹಿಡಿಯಲು ಐದು ತಂಡಗಳನ್ನು ನಿಯೋಜಿಸಿದ್ದಾರೆ.

ಸೋಮವಾರವೂ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು.

ಅರಣ್ಯಾಧಿಕಾರಿಗಳ ಪ್ರಕಾರ, ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಂದಿನಿಂದ ಚಿರತೆ ಕಾಣಿಸಿಕೊಂಡಿಲ್ಲ.

ನಮ್ಮ ಬಳಿ ಇರುವುದು ಸಿಸಿಟಿವಿ ದೃಶ್ಯಾವಳಿಗಳು ಮಾತ್ರ. ಹೀಗಾಗಿ ಚಿರತೆ ಸೆರೆಗೆ ಐದು ತಂಡಗಳನ್ನು ರಚಿಸಿದ್ದು, ಈ ತಂಡಗಳನ್ನು 10 ಎಕರೆ ಪ್ರದೇಶದಲ್ಲಿ ನಿಯೋಜಿಸಲಾಗಿದೆ ಎಂದು ಬೆಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜು ಹೇಳಿದ್ದಾರೆ.

ಚಿರತೆ ಕಾಣಿಸಿಕೊಂಡ ಸ್ಥಳವು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ(ಬಿಎನ್‌ಪಿ) ಸುಮಾರು 8 ಕಿಮೀ ದೂರದಲ್ಲಿದೆ. ಚಿರತೆ ಬೇಟೆಯನ್ನು ಹುಡುಕಿಕೊಂಡು ಉದ್ಯಾನವನದಿಂದ ಹೊರಗೆ ಬಂದಿರುವ ಸಾಧ್ಯತೆ ಇದೆ. ಅದರ ನಂತರ ಉದ್ಯಾನವನಕ್ಕೆ ಹಿಂತಿರುಗಿರಬಹುದು ಎಂದು ಅವರು ತಿಳಿಸಿದ್ದಾರೆ.

ಚಿರತೆ ಕಾಣಿಸಿಕೊಂಡ ಸ್ಥಳದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪಶುವೈದ್ಯರ ತಂಡವನ್ನು ಕೂಡ ನಿಯೋಜಿಸಲಾಗಿದೆ. ಇದು ಗಂಡು ಚಿರತೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. "ಆದಾಗ್ಯೂ, ಚಿರತೆಯ ವಯಸ್ಸನ್ನು ಕಂಡುಹಿಡಿಯಲಾಗಲಿಲ್ಲ" ಎಂದು ಅವರು ಹೇಳಿದ್ದಾರೆ.

ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ವಾಸಿಸುವ ಜನರು ರಾತ್ರಿ ವೇಳೆ ಹೊರಗೆ ಹೋಗದಂತೆ ಮತ್ತು ಯಾವುದೇ ತುರ್ತು ಸಂದರ್ಭದಲ್ಲಿ 1926 ಗೆ ಡಯಲ್ ಮಾಡುವಂತೆ ಅರಣ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT