ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು 
ರಾಜ್ಯ

ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. 

ನಂತರ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಭಾರತೀಯ ಸಂಸ್ಕೃತಿಯು ಜ್ಞಾನ, ವಿಜ್ಞಾನ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಒಳಗೊಂಡಿದೆ. ಹೆಸರಾಂತ ಶಾಸ್ತ್ರೀಯ ಸಂಗೀತ ಗಾಯಕಿ, ಗೌರವಾನ್ವಿತ ಗಂಗೂಬಾಯಿ ಹಾನಗಲ್ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾಲಯವು ಸಂಸ್ಕೃತಿ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಮುನ್ನಡೆಸುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದರು. 

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಶಿಕ್ಷಣ, ಕಲೆ, ಸಂಗೀತ ಮತ್ತು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅದರಂತೆ ಈ ದಿನ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ  ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಧನ್ಯತಾ ಭಾವವನ್ನು ತುಂಬಿದೆ ಎಂದರು. 

ಸಂಗೀತ ಕ್ಷೇತ್ರದಲ್ಲಿನ ಅಪಾರ ಕೊಡುಗೆಗಾಗಿ ಸ್ವಾಮೀಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ವರ್ಲ್ಡ್ ಕ್ಲಾಸಿಕಲ್ ತಮಿಳು ವಿಶ್ವವಿದ್ಯಾಲಯ, ಲಂಡನ್ ವತಿಯಿಂದ ಸ್ವಾಮೀಜಿಗಳಿಗೆ ಶ್ರೀ ಡಾಕ್ಟರ್ ಆಫ್ ಲೆಟರ್ಸ್ ಗೌರವ ಪದವಿ ನೀಡಿ ಗೌರವಿಸಿದೆ. ಈ ಎಲ್ಲಾ ಗೌರವಗಳಿಗೆ ಭಾಜನರಾಗಿರುವ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. 

ಸ್ವಾಮೀಜಿಯವರು ತಮ್ಮ ಚಿಕಿತ್ಸಕ ಮತ್ತು ಧ್ಯಾನ ಸಂಗೀತದ ಜೊತೆಗೆ ಪ್ರಾಚೀನ ವೈದಿಕ ಸಂಪ್ರದಾಯಗಳನ್ನು ಉತ್ತೇಜಿಸುವ ದಿವ್ಯ ಕೆಲಸವನ್ನು ಮಾಡುತ್ತಿದ್ದಾರೆ. ದತ್ತಪೀಠವು ಇಂದು ವೇದಗಳ ಅಧ್ಯಯನದ ಪ್ರಮುಖ ಕೇಂದ್ರವಾಗಿದೆ. ಇಷ್ಟೇ ಅಲ್ಲ, ನಮ್ಮ ಪೂರ್ವಜರು ನಮಗೆ ನೀಡಿದ ಹಾಡು, ಸಂಗೀತ, ಕಂಠದ ಶಕ್ತಿಯನ್ನು ಜನರ ಆರೋಗ್ಯಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪರಿಣಾಮಕಾರಿ ಆವಿಷ್ಕಾರಗಳನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. 

ಕಾರ್ಯಕ್ರಮದಲ್ಲಿ ಕುಲಪತಿ, ಪ್ರಾಧ್ಯಾಪಕ ನಾಗೇಶ್ ವಿ.ಬೆಟ್ಟಕೋಟೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT