ಸಾಂದರ್ಭಿಕ ಚಿತ್ರ 
ರಾಜ್ಯ

ಕರಾವಳಿಯ ಹಲವು ಕಡೆ ಐಟಿ ದಾಳಿ; ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್‌

ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್‌ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ಏಕಕಾಲದಲ್ಲಿ ಹಲವು ಜ್ಯುವೆಲರ್‌ಗಳ ಮೇಲ ದಾಳಿ ನಡೆಸಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಚಿನ್ನದಂಗಡಿ ಮಾಲೀಕರಿಗೆ ಶಾಕ್‌ ನೀಡಿದ ಆದಾಯ ತೆರಿಗೆ ಅಧಿಕಾರಿಗಳು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ಏಕಕಾಲದಲ್ಲಿ ಹಲವು ಜ್ಯುವೆಲರ್‌ಗಳ ಮೇಲ ದಾಳಿ ನಡೆಸಿದ್ದಾರೆ.

ಉಡುಪಿ ನಗರ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಮತ್ತಿತರ ಕಡೆಗಳಲ್ಲಿ ಐಟಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಚಿನ್ನಾಭರಣ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳೂರಿನ ಕದ್ರಿಯ ಆಭರಣ ಜ್ಯುವೆಲ್ಲರಿ ಮೇಲೆ ಐಟಿ ದಾಳಿ ನಡೆದಿದೆ. ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಆಭರಣ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಳಿಗ್ಗಿನಿಂದಲೂ ಐಟಿ ತಪಾಸಣೆ ನಡೆಯುತ್ತಿದೆ.

ಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT