ಕೆಎಸ್ ಆರ್ ಟಿಸಿ ಸಾಂದರ್ಭಿಕ ಚಿತ್ರ 
ರಾಜ್ಯ

ಕೆಎಸ್ ಆರ್ ಟಿಸಿ ಸಾರಿಗೆ ಸಿಬ್ಬಂದಿಗೆ ಪರಿಹಾರ ಮೊತ್ತ ಮೂರು ಪಟ್ಟು ಹೆಚ್ಚಳ!

ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ನವೆಂಬರ್ 1 ರಿಂದಲೇ ಇದು ಅನ್ವಯ ಆಗಲಿದೆ. ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್,ಪಾರ್ಶ್ವವಾಯು, ಹೃದಯಘಾತ, ಮೂತ್ರ ಪಿಂಡ ವೈಫಲ್ಯ ಮತ್ತಿತರ ಕಾರಣಗಳಿಂದ ಪ್ರತಿ ರ್ಷ 100 ನೌಕರರು ಮೃತಪಡುತ್ತಿದ್ದಾರೆ. ಇಂತಹ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು  ಈ ಮೊದಲು ನೀಡುತ್ತಿದ್ದ 3 ಲಕ್ಷ ರೂ. ಪರಿಹಾರ ಮೊತ್ತವನ್ನು ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಈ ಯೋಜನೆಗೆ ನೌಕರರು ಮಾಸಿಕ ವಂತಿಕೆಯನ್ನು ಪ್ರಸ್ತುತ ರೂ. 100 ರಿಂದ ರೂ. 200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು ರೂ.100ಗಳಿಗೆ ಪರಿಷ್ಕರಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT