ಕೆಎಸ್ ಆರ್ ಟಿಸಿ ಸಾಂದರ್ಭಿಕ ಚಿತ್ರ 
ರಾಜ್ಯ

ಕೆಎಸ್ ಆರ್ ಟಿಸಿ ಸಾರಿಗೆ ಸಿಬ್ಬಂದಿಗೆ ಪರಿಹಾರ ಮೊತ್ತ ಮೂರು ಪಟ್ಟು ಹೆಚ್ಚಳ!

ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ನವೆಂಬರ್ 1 ರಿಂದಲೇ ಇದು ಅನ್ವಯ ಆಗಲಿದೆ. ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್,ಪಾರ್ಶ್ವವಾಯು, ಹೃದಯಘಾತ, ಮೂತ್ರ ಪಿಂಡ ವೈಫಲ್ಯ ಮತ್ತಿತರ ಕಾರಣಗಳಿಂದ ಪ್ರತಿ ರ್ಷ 100 ನೌಕರರು ಮೃತಪಡುತ್ತಿದ್ದಾರೆ. ಇಂತಹ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು  ಈ ಮೊದಲು ನೀಡುತ್ತಿದ್ದ 3 ಲಕ್ಷ ರೂ. ಪರಿಹಾರ ಮೊತ್ತವನ್ನು ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಈ ಯೋಜನೆಗೆ ನೌಕರರು ಮಾಸಿಕ ವಂತಿಕೆಯನ್ನು ಪ್ರಸ್ತುತ ರೂ. 100 ರಿಂದ ರೂ. 200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು ರೂ.100ಗಳಿಗೆ ಪರಿಷ್ಕರಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT