ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ಬೀದಿ ನಾಯಿಗಳು ದಾಳಿ, ಸಾವು

ಮಂಡ್ಯ ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮಂಡ್ಯ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಫುಟ್‌ಪಾತ್‌ನಲ್ಲಿ ಮಲಗಿದ್ದ ವೃದ್ಧನ ಮೇಲೆ ದಾಳಿ ನಡೆಸಿ, ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಗುರುತನ್ನು ಇನ್ನೂ ಅಧಿಕಾರಿಗಳು ಪತ್ತೆಹಚ್ಚಬೇಕಿದ್ದು, ಸೋಮವಾರ ತಡರಾತ್ರಿ ಮಂಡ್ಯ ನಗರ ಸಮೀಪದ ಬೆಸಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ವ್ಯಕ್ತಿ ಬಾರ್‌ನಲ್ಲಿ ಮದ್ಯ ಸೇವಿಸಿ ಹೊರಗೆ ಮಲಗಿದ್ದರು. ಮಧ್ಯರಾತ್ರಿ ಬೀದಿ ನಾಯಿಗಳು ಆತನ ಮೇಲೆ ದಾಳಿ ಮಾಡಿ, ಕೊಂದು ಹಾಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಕಪಕ್ಕದಲ್ಲಿ ಯಾರೂ ಇಲ್ಲದ ಕಾರಣ ಆತನ ಕಿರುಚಾಟ ಯಾರಿಗೂ ಕೇಳಿಸಿಲ್ಲ. ಸಂತ್ರಸ್ತನು ಕೂಡ ಮದ್ಯದ ಅಮಲಿನಲ್ಲಿದ್ದರು.

ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸಂತ್ರಸ್ತ ಬೇರೆ ಊರಿನವರು ಎಂದು ತಿಳಿದುಬಂದಿದ್ದು, ಅವರ ಗುರುತನ್ನು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT