ಸಾಂದರ್ಭಿಕ ಚಿತ್ರ 
ರಾಜ್ಯ

ಖಾತ್ರಿ ಯೋಜನೆಗೆ ಹಣ ಹೊಂದಿಸಲು ಸರ್ಕಾರದ ಹರಸಾಹಸ: ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ ಸಮವಸ್ತ್ರ!

ಐದು ಖಾತ್ರಿ ಯೋಜನೆಗಳಲ್ಲಿ ನಾಲ್ಕೈದು ಯೋಜನೆಗಳನ್ನು ಜಾರಿಗೆ ತಂದ ನಂತರ ಕಾಂಗ್ರೆಸ್ ಸರ್ಕಾರವು ರಾಜ್ಯಾದ್ಯಂತ ವಸತಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ.

ಬೆಳಗಾವಿ: ಐದು ಖಾತ್ರಿ ಯೋಜನೆಗಳಲ್ಲಿ ನಾಲ್ಕೈದು ಯೋಜನೆಗಳನ್ನು ಜಾರಿಗೆ ತಂದ ನಂತರ ಕಾಂಗ್ರೆಸ್ ಸರ್ಕಾರವು ರಾಜ್ಯಾದ್ಯಂತ ವಸತಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ.

ರಾಜ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಜಾತಿಗಳು ಸೇರಿದಂತೆ ವಿವಿಧ ಇಲಾಖೆಗಳಿಂದ ನಡೆಸಲ್ಪಡುವ 833 ವಸತಿ ಶಾಲೆಗಳನ್ನು ಹೊಂದಿದೆ. ವಿದ್ಯಾರ್ಥಿಗಳ ಮೂಲಭೂತ ಅವಶ್ಯಕತೆಗಳಾದ ಸಮವಸ್ತ್ರ, ಶೂ, ಸಾಬೂನು, ಟೂತ್‌ಪೇಸ್ಟ್ ಮುಂತಾದವುಗಳನ್ನು ಸರ್ಕಾರವು ವಿದ್ಯಾರ್ಥಿಗಳಿಗೆ ನಿಯಮಿತವಾಗಿ ಪೂರೈಸುತ್ತದೆ. ಆದರೆ ಈ ವರ್ಷ ಜೂನ್‌ನಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಕಿಟ್‌ಗಳು ಇನ್ನೂ ಪೂರೈಕೆಯಾಗಿಲ್ಲ.

ಸದ್ಯಕ್ಕೆ ವಿದ್ಯಾರ್ಥಿಗಳ ಪೋಷಕರು ಈ ವೆಚ್ಚವನ್ನು ಭರಿಸುತ್ತಿದ್ದಾರೆ. ಸರ್ಕಾರದ ಹಣದ ಕೊರತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವುದು ಕಷ್ಟಕರವಾಗಿದೆ ಎಂದು ವಸತಿ ಶಾಲೆಯ ಶಿಕ್ಷಕರೊಬ್ಬರು ಹೇಳಿದರು. ಸರ್ಕಾರವು  ಹಣದ ಕೊರತೆ ಎದುರಿಸುತ್ತಿದೆ, ಹೀಗಾಗಿ ಕಿಟ್‌ಗಳನ್ನು ಸರಬರಾಜು ಮಾಡಲಾಗಿಲ್ಲ ಎಂದು ಅವರು ಹೇಳಿದರು.

ಕರ್ನಾಟಕ ವಸತಿ ಸಂಸ್ಥೆಗಳ ಸೊಸೈಟಿಯ ವಸತಿ ಶಾಲೆಗಳಲ್ಲಿ 6ನೇ ತರಗತಿಯಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿದ್ದಾರೆ. ಪ್ರತಿ ತರಗತಿಯಲ್ಲಿ ಸುಮಾರು 50 ವಿದ್ಯಾರ್ಥಿಗಳು ಮತ್ತು ಪ್ರತಿ ಶಾಲೆಯಲ್ಲಿ ಸುಮಾರು 250 ವಿದ್ಯಾರ್ಥಿಗಳು ಇದ್ದಾರೆ. ರಾಜ್ಯಾದ್ಯಂತ 833 ಸರ್ಕಾರಿ ವಸತಿ ಶಾಲೆಗಳಿದ್ದು, ಈ ಶಾಲೆಗಳಲ್ಲಿ ಓದುತ್ತಿರುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಎರಡು ಲಕ್ಷಕ್ಕೂ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ವಸತಿ ಶಾಲಾ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು  ಇಲಾಖೆಗೆ ಬರುವುದಿಲ್ಲ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಎಂಬ ವಿಶೇಷ ಕೋಶವನ್ನು ರಚಿಸಲಾಗಿದೆ ಮತ್ತು ಅದು ಬೆಂಗಳೂರಿನಲ್ಲಿ ಸ್ಥಾಪನೆಯಾಗಿದೆ ಎಂದು ಅಥಣಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಯಾದವಾಡ ಹೇಳಿದ್ದಾರೆ. ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಕ್ಷೇತ್ರ ಪುನರ್ ವಿಂಗಡಣೆ-ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!

ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ, ವಿಪಕ್ಷಗಳ ಬಹಿಷ್ಕಾರ: ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!

ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿಗಳ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್, ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಹಾರ್ಮುಜ್ ಜಲಸಂಧಿ ದಿಗ್ಬಂಧನ: ಹಿಂದೆ ಸರಿಯದಿದ್ದರೆ ಗಲ್ಪ್ ವ್ಯಾಪಾರ ಸಂಪೂರ್ಣ ಅಸ್ತವ್ಯಸ್ತ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ..!

SCROLL FOR NEXT