ಸಾಂಕೇತಿಕ ಚಿತ್ರ 
ರಾಜ್ಯ

ತುಮಕೂರು: ಟೊಮೆಟೊ ಬೆಲೆ ಕುಸಿತ; ರೈತ ಆತ್ಮಹತ್ಯೆಗೆ ಶರಣು

ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ತುಮಕೂರು: ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತರ ರೈತನನ್ನು ಎರ್ರಾಪಾಳ್ಯ ಗ್ರಾಮದ ನಾರಾಯಣಪ್ಪ(65) ಎಂದು ಗುರುತಿಸಲಾಗಿದೆ.

ನಾರಾಯಣಪ್ಪ ಅವರು ತಮ್ಮ ಜಮೀನಿನಲ್ಲಿ ಹೈಟೆನ್ಶನ್ ವಿದ್ಯುತ್ ಟವರ್‌ನ ಬೀಮ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

ನಾರಾಯಣಪ್ಪ ಅವರು 5 ಲಕ್ಷ ರೂಪಾಯಿ ಸಾಲ ಮಾಡಿ ಟೊಮೆಟೊ ಬೆಳೆ ಬೆಳೆದಿದ್ದರು. ಆದರೆ ಬೆಳೆ ನಷ್ಟ ಹಾಗೂ ಬೆಲೆ ಕುಸಿತದಿಂದ ಸಾಲ ಮರುಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಾರಾಯಣಪ್ಪ ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಈ ಸಂಬಂಧ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್