ಸಾಂಕೇತಿಕ ಚಿತ್ರ 
ರಾಜ್ಯ

ತುಮಕೂರು: ಟೊಮೆಟೊ ಬೆಲೆ ಕುಸಿತ; ರೈತ ಆತ್ಮಹತ್ಯೆಗೆ ಶರಣು

ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ತುಮಕೂರು: ಟೊಮೆಟೊ ಬೆಲೆ ಕುಸಿತದಿಂದ ಹಾಗೂ ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಾವಗಡ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೃತರ ರೈತನನ್ನು ಎರ್ರಾಪಾಳ್ಯ ಗ್ರಾಮದ ನಾರಾಯಣಪ್ಪ(65) ಎಂದು ಗುರುತಿಸಲಾಗಿದೆ.

ನಾರಾಯಣಪ್ಪ ಅವರು ತಮ್ಮ ಜಮೀನಿನಲ್ಲಿ ಹೈಟೆನ್ಶನ್ ವಿದ್ಯುತ್ ಟವರ್‌ನ ಬೀಮ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

ನಾರಾಯಣಪ್ಪ ಅವರು 5 ಲಕ್ಷ ರೂಪಾಯಿ ಸಾಲ ಮಾಡಿ ಟೊಮೆಟೊ ಬೆಳೆ ಬೆಳೆದಿದ್ದರು. ಆದರೆ ಬೆಳೆ ನಷ್ಟ ಹಾಗೂ ಬೆಲೆ ಕುಸಿತದಿಂದ ಸಾಲ ಮರುಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನಾರಾಯಣಪ್ಪ ಅವರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಈ ಸಂಬಂಧ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT