ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ 
ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ: ತಾಂತ್ರಿಕ ತನಿಖಾ ವರದಿ ಸಲ್ಲಿಕೆ 15 ದಿನ ವಿಳಂಬ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿ ಅವರಣದಲ್ಲಿನ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ತಾಂತ್ರಿಕ ತನಿಖಾ ಸಮಿತಿ ವರದಿ ಸಲ್ಲಿಸುವುದು 15 ದಿನ ತಡವಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿ ಅವರಣದಲ್ಲಿನ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ತಾಂತ್ರಿಕ ತನಿಖಾ ಸಮಿತಿ ವರದಿ ಸಲ್ಲಿಸುವುದು 15 ದಿನ ತಡವಾಗಲಿದೆ ಎಂದು ಹೇಳಲಾಗಿದೆ.

ತನಿಖಾ ಸಮಿತಿಯ ಮುಖ್ಯಸ್ಥ ಬಿ.ಎಸ್.ಪ್ರಹ್ಲಾದ್ ಪ್ರಕಾರ, ಆಗಸ್ಟ್ 31 ರೊಳಗೆ ವರದಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ವರದಿ ಸಲ್ಲಿಕೆ ಸುಮಾರು 15ದಿನ ತಡವಾಗಲಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಎಸ್ ಪ್ರಹ್ಲಾದ್ ಅವರು, "ಬಿಬಿಎಂಪಿಯಲ್ಲಿ ಕೆಲವು ಕಾರ್ಯವಿಧಾನದ ವಿಳಂಬ ಮತ್ತು ಇತರ ಜವಾಬ್ದಾರಿಗಳಿಂದ, ಸಮಯಕ್ಕೆ ವರದಿ ಸಲ್ಲಿಸಲು ಸಾಧ್ಯವಾಗಲಿಲ್ಲ, ಈಗ ಆಂತರಿಕ ಹದಿನೈದು ದಿನದೊಳಗೆ ತನಿಖಾ ವರದಿಯನ್ನು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಅಂತೆಯೇ ಸರ್ಕಾರ, ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತಿಗಳು ಸರ್ಕಾರದ ಗೃಹಲಕ್ಷ್ಮಿ ಯೋಜನೆ ಮತ್ತು ಕಾಂಗ್ರೆಸ್ ಸರ್ಕಾರದ 100 ದಿನಗಳ ಆಯೋಜನೆಯಲ್ಲಿ ನಿರತವಾಗಿವೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದರು.

ಮೂಲಗಳ ಪ್ರಕಾರ, ಆಂತರಿಕ ತನಿಖೆಯು ಆಗಸ್ಟ್ 11 ರಂದು ಅಗ್ನಿ ಅವಘಡಕ್ಕೆ ಏನು ಕಾರಣವಾಯಿತು?, ಸಂಗ್ರಹಿಸಲಾದ ರಾಸಾಯನಿಕಗಳು ಮತ್ತು ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಗಳ ಸುತ್ತ ತನಿಖೆ ಸುತ್ತುತ್ತದೆ. ಸಿಸಿಟಿವಿ ದೃಶ್ಯಾವಳಿಗಳನ್ನೂ ತಂಡ ಪರಿಶೀಲಿಸಲಿದೆ. ಹೆಚ್ಚು ಸುಡುವ ರಾಸಾಯನಿಕವಾದ ಬೆಂಜೀನ್ ಸೋರಿಕೆಯಾಗಿದ್ದು, ಇದೇ ಬೆಂಕಿ ಅವಘಡಕ್ಕೆ ಕಾರಣವಾಗಿತ್ತೇ? ಮತ್ತು ಬಿಟುಮೆನ್ ಪರೀಕ್ಷೆಯ ಸಮಯದಲ್ಲಿ ಕಿಡಿಗಳು ಸ್ಫೋಟಕ್ಕೆ ಕಾರಣವಾಗಿತ್ತು ಎಂದು ಅಧಿಕಾರಿಗಳು ನಂಬಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT