ಬೆಂಗಳೂರು ವಿಮಾನ ನಿಲ್ದಾಣ 
ರಾಜ್ಯ

'ನಾನು ಟೆರರಿಸ್ಟ್, ಬಾಂಬ್ ಇಟ್ಟಿದ್ದೇನೆ': ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ, ಬಾಲಕನ ಹುಡುಗಾಟಕ್ಕೆ ಪೇಚಿಗೆ ಸಿಲುಕಿದ ಪೋಷಕರು!

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಹೆಲ್ಪ್‌ ಡೆಸ್ಕ್‌ಗೆ ''ಬಾಂಬ್‌ ಇದೆ ಎಚ್ಚರವಾಗಿರಿ'' ಎಂದು ವಾಟ್ಸ್ಯಾಪ್‌ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದ ಘಟನೆ ನಡೆದಿದೆ. ಆಗಸ್ಟ್ 28ರಂದು ಬೆಳಗ್ಗೆ 11.43ರ ಸುಮಾರಿಗೆ ಪ್ರಯಾಣಿಕರ ಹೆಲ್ಪ್‌ಲೈನ್‌ನ ವಾಟ್ಸ್ಯಾಪ್‌ ನಂಬರ್‌ಗೆ ಅಪರಿಚಿತ ನಂಬರ್‌ನಿಂದ ''ನಾನು ಟೆರರಿಸ್ಟ್‌, ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ. ಎಚ್ಚರವಾಗಿರಿ'' ಎಂದು ನಗುವ ಇಮೋಜಿ ಸಂದೇಶ ಬಂದಿತ್ತು. ಈ ಸಂದೇಶ ಗಮನಿಸಿದ ಟರ್ಮಿನಲ್‌ ಸಿಬ್ಬಂದಿ ಕೆಲಕಾಲ ಆತಂಕಗೊಂಡಿದ್ದರು.

ಆದರೆ, ಕೆಲವೇ ನಿಮಿಷಗಳಲ್ಲಿ ಅದೇ ನಂಬರ್‌ನಿಂದ ''ದಯವಿಟ್ಟು ಕ್ಷಮಿಸಿ ನನ್ನ ಮಗನ ಬಳಿ ಮೊಬೈಲ್‌ ಕೊಟ್ಟಿದ್ದು ಅವನೇ ಈ ರೀತಿ ಸಂದೇಶ ಕಳುಹಿಸಿದ್ದಾನೆ'' ಎಂಬ ಸಂದೇಶ ಬಂದಿತ್ತು. ಜತೆಗೆ, ಕ್ಷಮೆ ಕೋರಿ ಮತ್ತೊಂದು ಸಂದೇಶ ಬಂದ ಬಳಿಕ ಸಿಬ್ಬಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಈ ಬೆದರಿಕೆ ಸಂದೇಶ ಸಂಬಂಧ ಸಂದೇಶ ಕಳುಹಿಸಿದ ನಂಬರ್‌ ಉಲ್ಲೇಖಿಸಿ ಏರ್‌ಪೋರ್ಟ್‌ ಟರ್ಮಿನಲ್‌ ಸಿಬ್ಬಂದಿ ಮೊಹಮದ್‌ ಜಾಹಿರ್‌ ದೂರು ನೀಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಕೋಲ್ಕತ್ತಾದಿಂದ ಬಂದ ಸಂದೇಶ
ಬಾಂಬ್‌ ಬೆದರಿಕೆ ಸಂದೇಶ ಕೋಲ್ಕತ್ತಾ ಮೂಲದ ಮಹಿಳೆ ಮೊಬೈಲ್‌ ನಂಬರ್‌ನಿಂದ ಬಂದಿದ್ದು, ಅವರ ಮಗ ಸಂದೇಶ ಕಳುಹಿಸಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ, ಅಲ್ಲಿನ ಸ್ಥಳೀಯ ಪೊಲೀಸರು ಕೂಡ ಮೊಬೈಲ್‌ ನಂಬರ್‌ ಟ್ರೇಸ್‌ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಪ್ರಸಾದ್‌ ತಿಳಿಸಿದ್ದಾರೆ.

“ಈ ಸಂದೇಶವನ್ನು ಪಶ್ಚಿಮ ಬಂಗಾಳದಿಂದ ಕಳುಹಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಪ್ರಕರಣ ಸಂಬಂಧ ಇನ್ನೂ ಯಾರ ಬಂಧನವೂ ಆಗಿಲ್ಲ. ಎರಡೂ ಸಂದೇಶಗಳ ಹಿಂದೆ ಒಂದೇ ವ್ಯಕ್ತಿ ಇದ್ದಾನೆಯೇ ಅಥವಾ ಅದು ಪೋಷಕರು ಮತ್ತು ಮಗನೇ ಎಂಬುದು ಸ್ಪಷ್ಟವಾಗಿಲ್ಲ. ಯಾರ ಹೆಸರಿನಲ್ಲಿ ಸಿಮ್ ಕಾರ್ಡ್ ನೀಡಲಾಗಿದೆಯೋ ಅವರ ವಿಳಾಸವನ್ನು ನಾವು ಪಡೆದುಕೊಂಡಿದ್ದೇವೆ. ಪೋಷಕರು ತಂದೆ ಅಥವಾ ತಾಯಿಯೇ ಎಂಬುದು ಸ್ಪಷ್ಟವಾಗಿಲ್ಲ. ಶಂಕಿತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ತನಿಖೆಯ ಭಾಗವಾಗಿರುವ ಅಧಿಕಾರಿ ತಿಳಿಸಿದ್ದಾರೆ.

TNIE ಬೆದರಿಕೆ ಸಂದೇಶವನ್ನು ಕಳುಹಿಸಿದ ಸಂಖ್ಯೆಯನ್ನು ಸಂಪರ್ಕಿಸಿದಾಗ, ಹೌರಾದ ವ್ಯಕ್ತಿಯೊಬ್ಬರು ಸಂದೇಶ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ. “ನಾನು ಸರಳ ವ್ಯಕ್ತಿ ಮತ್ತು ಅಪರಾಧಿ ಅಲ್ಲ, ಆದರೆ ನನ್ನ ಫೋನ್‌ನಿಂದ ಕೆಲವು ಅನಿರೀಕ್ಷಿತ ಸಂಗತಿಗಳು ಸಂಭವಿಸಿವೆ ಅಥವಾ ನನ್ನ ಸಂಖ್ಯೆಯೊಂದಿಗೆ ಇರಬಹುದು, ಅದನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ನನ್ನ ಕಡೆಯಿಂದ ಭವಿಷ್ಯದಲ್ಲಿ ಈ ರೀತಿಯ ವಿಷಯ ಪುನರಾವರ್ತನೆಯಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ. 

ಬಿಐಎಎಲ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT