ಮಣಿಪಾಲ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತುರ್ತು ಚಿಕಿತ್ಸೆಯ ಸೌಲಭ್ಯಗಳನ್ನುಒಳಗೊಂಡಿರುವ ಅತ್ಯಾಧುನಿಕ ಆ್ಯಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಆರೋಗ್ಯ ಸಚಿವ. 
ರಾಜ್ಯ

ನವಜಾತ ಶಿಶುಗಳಿಗೆ ಆಂಬ್ಯುಲೆನ್ಸ್ ಸೇವೆ: ಟೆಲಿ-ಎನ್‌ಐಸಿಯು ಸೇವೆ ಆರಂಭಿಸಿದ ಸರ್ಕಾರ!

ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸೇವೆ - ನಿಯೋನಾಟಲ್ ಕೇರ್ ಆನ್ ವೀಲ್ಸ್ (ಮಾರ್ಸ್-ನೌ) ಗೆ ಚಾಲನೆ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸರ್ವೀಸ್ - ನಿಯೋನಾಟಲ್ ಕೇರ್ ಆನ್ ವೀಲ್ಸ್ (MARS-NOW) ಗೆ ಚಾಲನೆ ನೀಡಿದರು.

ಬೆಂಗಳೂರು ಮತ್ತು ನಗರದ ಹೊರವಲಯದಲ್ಲಿ ನವಜಾತ ಶಿಶುಗಳ ಆರೈಕೆಗಾಗಿ ಈ ಆ್ಯಂಬುಲೆನ್ಸ್ ಸೇವೆಗಳನ್ನು ಪ್ರಾರಂಭಿಸಲಾಗಿದೆ.

ಆ್ಯಂಬುಲೆನ್ಸ್ ಗಳಲ್ಲಿ ಶಿಶು ಇನ್ಕ್ಯುಬೇಟರ್‌ಗಳು, ಹೃದಯ ಮತ್ತು ಶ್ವಾಸಕೋಶದ ಮಾನಿಟರ್‌ಗಳು, ಹೈ ಫ್ರೀಕ್ವೆನ್ಸಿ, ವೆಂಟಿಲೇಟರ್‌ಗಳು, ನೈಟ್ರಿಕ್ ಆಕ್ಸೈಡ್ ಅಡ್ಮಿನಿಸ್ಟ್ರೇಷನ್, ಬ್ಲಾಂಕೆಟ್ ವಾರ್ಮರ್‌ಗಳು ಮತ್ತು ಸುಗಮ ಪ್ರಯಾಣಕ್ಕಾಗಿ ಅಗತ್ಯ ಸೇವೆಗಳನ್ನು ಇರಿಸಲಾಗಿದೆ. ತುರ್ತು ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಮಕ್ಕಳ ಆರೋಗ್ಯ ಕಾಪಾಡಲು ಇದು ಸಹಾಯ ಮಾಡುತ್ತವೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

ಸಾಧ್ಯವಾದಷ್ಟು ಕಡಿಮೆ ಬೆಲೆಯಲ್ಲಿ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಖಾಸಗಿ ವಲಯದೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದರು.

ಮಣಿಪಾಲ್ ಆಸ್ಪತ್ರೆಯು ಸಹಾಯವಾಣಿ (080-22221111) ಸೇವೆಯನ್ನು ಪ್ರಾರಂಭಿಸಿದ್ದು, ಇದನ್ನು ಕಡಿಮೆ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಗಳು ಕೂಡ ಬಳಕೆ ಮಾಡಬಹುದು. MARS-NOW ಮೂಲಕ ಮಕ್ಕಳನ್ನು ಆಸ್ಪತ್ರೆಗಳಿಗೆ ದಾಖಲಿಸಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT