ಮಣಿಪಾಲ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತುರ್ತು ಚಿಕಿತ್ಸೆಯ ಸೌಲಭ್ಯಗಳನ್ನುಒಳಗೊಂಡಿರುವ ಅತ್ಯಾಧುನಿಕ ಆ್ಯಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಆರೋಗ್ಯ ಸಚಿವ. 
ರಾಜ್ಯ

ನವಜಾತ ಶಿಶುಗಳಿಗೆ ಆಂಬ್ಯುಲೆನ್ಸ್ ಸೇವೆ: ಟೆಲಿ-ಎನ್‌ಐಸಿಯು ಸೇವೆ ಆರಂಭಿಸಿದ ಸರ್ಕಾರ!

ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸೇವೆ - ನಿಯೋನಾಟಲ್ ಕೇರ್ ಆನ್ ವೀಲ್ಸ್ (ಮಾರ್ಸ್-ನೌ) ಗೆ ಚಾಲನೆ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸರ್ವೀಸ್ - ನಿಯೋನಾಟಲ್ ಕೇರ್ ಆನ್ ವೀಲ್ಸ್ (MARS-NOW) ಗೆ ಚಾಲನೆ ನೀಡಿದರು.

ಬೆಂಗಳೂರು ಮತ್ತು ನಗರದ ಹೊರವಲಯದಲ್ಲಿ ನವಜಾತ ಶಿಶುಗಳ ಆರೈಕೆಗಾಗಿ ಈ ಆ್ಯಂಬುಲೆನ್ಸ್ ಸೇವೆಗಳನ್ನು ಪ್ರಾರಂಭಿಸಲಾಗಿದೆ.

ಆ್ಯಂಬುಲೆನ್ಸ್ ಗಳಲ್ಲಿ ಶಿಶು ಇನ್ಕ್ಯುಬೇಟರ್‌ಗಳು, ಹೃದಯ ಮತ್ತು ಶ್ವಾಸಕೋಶದ ಮಾನಿಟರ್‌ಗಳು, ಹೈ ಫ್ರೀಕ್ವೆನ್ಸಿ, ವೆಂಟಿಲೇಟರ್‌ಗಳು, ನೈಟ್ರಿಕ್ ಆಕ್ಸೈಡ್ ಅಡ್ಮಿನಿಸ್ಟ್ರೇಷನ್, ಬ್ಲಾಂಕೆಟ್ ವಾರ್ಮರ್‌ಗಳು ಮತ್ತು ಸುಗಮ ಪ್ರಯಾಣಕ್ಕಾಗಿ ಅಗತ್ಯ ಸೇವೆಗಳನ್ನು ಇರಿಸಲಾಗಿದೆ. ತುರ್ತು ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಮಕ್ಕಳ ಆರೋಗ್ಯ ಕಾಪಾಡಲು ಇದು ಸಹಾಯ ಮಾಡುತ್ತವೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

ಸಾಧ್ಯವಾದಷ್ಟು ಕಡಿಮೆ ಬೆಲೆಯಲ್ಲಿ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಖಾಸಗಿ ವಲಯದೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದರು.

ಮಣಿಪಾಲ್ ಆಸ್ಪತ್ರೆಯು ಸಹಾಯವಾಣಿ (080-22221111) ಸೇವೆಯನ್ನು ಪ್ರಾರಂಭಿಸಿದ್ದು, ಇದನ್ನು ಕಡಿಮೆ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಗಳು ಕೂಡ ಬಳಕೆ ಮಾಡಬಹುದು. MARS-NOW ಮೂಲಕ ಮಕ್ಕಳನ್ನು ಆಸ್ಪತ್ರೆಗಳಿಗೆ ದಾಖಲಿಸಬಹುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT