ಕೊಡವ ರಾಷ್ಟ್ರೀಯ ಸಮಿತಿ ಸಾಂದರ್ಭಿಕ ಚಿತ್ರ 
ರಾಜ್ಯ

ಕೊಡವ ರಾಷ್ಟ್ರೀಯ ಸಮಿತಿಯಿಂದ ಕೊಡಗಿನಾದ್ಯಂತ 'ಪಾದಯಾತ್ರೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ರಾಷ್ಟ್ರೀಯ ಸಮಿತಿ ಜಿಲ್ಲೆಯಾದ್ಯಂತ ‘ಪಾದಯಾತ್ರೆ’ಗೆ ಕರೆ ನೀಡಿದೆ. ಸಮಿತಿ ಒಂಬತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದು, ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ಮಡಿಕೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ರಾಷ್ಟ್ರೀಯ ಸಮಿತಿ ಜಿಲ್ಲೆಯಾದ್ಯಂತ ‘ಪಾದಯಾತ್ರೆ’ಗೆ ಕರೆ ನೀಡಿದೆ. ಸಮಿತಿ ಒಂಬತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದು, ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ಕೊಡವ ಸಮುದಾಯದ ಕಾನೂನು ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವ ಅರ್ಥಶಾಸ್ತ್ರಜ್ಞ ಡಾ.ಸುಬ್ರಹ್ಮಣ್ಯ ಸ್ವಾಮಿ ಅವರ ಜನ್ಮದಿನದಂದು ಸೆ.15ರಂದು ತಲಕಾವೇರಿಯಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ಕೊಡವ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಎನ್‌ಯು ನಾಚಪ್ಪ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಪಾದಯಾತ್ರೆಯನ್ನು ಐದು ಹಂತಗಳಲ್ಲಿ ಆಯೋಜಿಸಲಾಗುವುದು ಮತ್ತು ಸಮುದಾಯದ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ 'ನಾಡ್ ಮಂದ್' (ಗ್ರಾಮಗಳಲ್ಲಿನ ಹಿಂದಿನ ನ್ಯಾಯಾಲಯ) ಸಭೆಗಳನ್ನು ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ನಾಪೋಕ್ಲು ನಲ್ಲಿರುವ  ಶ್ರೀ ಪಾಡಿ ಇಗ್ಗುತಪ್ಪ ದೇವಸ್ಥಾನದ ಬಳಿ ಪಾದಯಾತ್ರೆ ಅಂತ್ಯಗೊಳಿಸಲು ಯೋಜಿಸಲಾಗಿದೆ. ಕೊಡಗಿಗೆ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆಯ ಜೊತೆಗೆ ಕೊಡವ ಸಮುದಾಯಕ್ಕೆ ಎಸ್‌ಟಿ ವರ್ಗಕ್ಕೆ ಸೇರಿಸಬೇಕು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರಿಸುವುದು, ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಕೊಡವ ಸಂಸ್ಕೃತಿ ಸೇರಿಸುವುದು, ಹೊಸ ಸಂಸತ್ತಿನಲ್ಲಿ ಕೊಡವರಿಗೆ ಪ್ರಾತಿನಿಧ್ಯ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಆಯೋಜಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT