ಶನಿವಾರ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯ ಎಂಜಿನಿಯರ್ ಸಿಎಂ ಶಿವಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. 
ರಾಜ್ಯ

ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು

ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್‌ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.

ಬೆಂಗಳೂರು: ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್‌ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.

ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮೃತಪಟ್ಟ ಮುಖ್ಯ ಎಂಜಿನಿಯರ್‌ ಸಿ.ಎಂ. ಶಿವಕುಮಾರ್ ಸ್ಮರಣಾರ್ಥ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಶಿವಕುಮಾರ್ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಶೀಘ್ರದಲ್ಲೇ ಚೆಕ್ ಅನ್ನು ಹಸ್ತಾಂತರ ಮಾಡಲಾಗುವುದು. ಅಲ್ಲದೆ, ಶಿವಕುಮಾರ್ ನೆನಪಿಗಾಗಿ ಎಲ್ಲಾ ರೀತಿಯ ಸೌಲಭ್ಯವುಳ್ಳ ಎರಡು ಆಂಬುಲೆನ್ಸ್‌ಗಳನ್ನು ಬಿಬಿಎಂಪಿ ನೌಕರರ ಸಹಕಾರ ಸಂಘ ಹಾಗೂ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆಗೆ ವಿತರಿಸಲಾಗುವುದು ಎಂದು ಹೇಳಿದರು.

ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮಾತನಾಡಿ, ಶಿವಕುಮಾರ್ ಅವರ ಪತ್ನಿಗೆ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಅಗ್ನಿ ಅವಘಡದ ಆಂತರಿಕ ತನಿಖೆ ಕುರಿತು ಮಾತನಾಡಿ, ವರದಿ ನೀಡಲು 15 ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT