ಕೃಷ್ಣ ಬೈರೇಗೌಡ 
ರಾಜ್ಯ

ಬರಪೀಡಿತ ತಾಲ್ಲೂಕ್ ಘೋಷಣೆ, ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ- ಕೃಷ್ಣ ಬೈರೇಗೌಡ

ಬರ ಪೀಡಿತ ತಾಲ್ಲೂಕ್ ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ  ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕೋಲಾರ: ಬರ ಪೀಡಿತ ತಾಲ್ಲೂಕ್ ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ  ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 18 ರಂದು ಸುಮಾರು 113 ತಾಲ್ಲೂಕುಗಳನ್ನು ತಾತ್ಕಾಲಿಕ ಬರಪೀಡಿತ ಎಂದು ಪಟ್ಟಿ ಮಾಡಿಕೊಂಡಿದ್ದೇವೆ. ಆಗಸ್ಟ್ 31 ರಂದು ಸುಮಾರು 75 ತಾಲ್ಲೂಕು ಗಳ ಪಟ್ಟಿ ಸಿದ್ದ ಮಾಡಿದ್ದೇವೆ. ಯಾವ ತಾಲ್ಲೂಕು ಅರ್ಹವಾಗುತ್ತವೆ ಎಂಬುದನ್ನು ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು, ಅವಶ್ಯವಿದ್ದರೆ ಸಚಿವ ಸಂಪುಟದ ಗಮನಕ್ಕೂ ತರಲಾಗುವುದು ಎಂದರು.

ಆಯಾಯ ತಾಲ್ಲೂಕು ಬೆಳೆ ಸಮೀಕ್ಷೆ ನಡೆಸಿ ಅದರ ಆಧಾರದ ಮೇಲೆ  ನಾಳೆ ಬರಪೀಡಿತ ತಾಲ್ಲೂಕುಗಳ ಮೊದಲ ಪಟ್ಟಿ ಘೋಷಿಸಲಾಗುವುದು, ಮುಂದಿನ ಒಂದು ವಾರ ಅಥವಾ 10 ದಿನಗಳಲ್ಲಿ ಎರಡನೇ ಪಟ್ಟಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು. ಮಳೆ ಪರಿಸ್ಥಿತಿ ಆಧಾರದ  ಮೂರನೇ ಪಟ್ಟಿ ಸಿದ್ಧಪಡಿಸಲೂ ಸರ್ಕಾರ ಚಿಂತನೆ ನಡೆಸಿದೆ.ಮೊದಲ ಹಾಗೂ ಎರಡನೇ ಪಟ್ಟಿಯಲ್ಲಿ ಬಿಟ್ಟುಹೋದ ತಾಲ್ಲೂಕುಗಳನ್ನು ಮೂರನೇ ಪಟ್ಟಿಯಲ್ಲಿ ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT