ಕೆ ಎಚ್ ಮುನಿಯಪ್ಪ 
ರಾಜ್ಯ

ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ: ಆಹಾರ ಸಚಿವ ಕೆಎಚ್​ ಮುನಿಯಪ್ಪ

ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ  ಸಚಿವ ಕೆ ಎಚ್ ಮುನಿಯಪ್ಪ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 ಕೆಜಿ ಅಕ್ಕಿ ನೀಡಲಾಗುವುದು ಎಂದು ಆಹಾರ  ಸಚಿವ ಕೆ ಎಚ್ ಮುನಿಯಪ್ಪ ಅವರು ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲು ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬರಪೀಡಿತ ತಾಲೂಕುಗಳಲ್ಲಿ ಐದು ಕೆಜಿ ಅಕ್ಕಿಗೆ ಹಣ ಬದಲು ಅಕ್ಕಿಯನ್ನೇ ಪೂರೈಕೆ ಮಾಡಲಾಗುತ್ತದೆ. ಬರ ಪೀಡಿತ ತಾಲೂಕುಗಳಲ್ಲಿ ಒಟ್ಟು ಹತ್ತು ಕೆಜಿ ಅಕ್ಕಿ ಪೂರೈಕೆ ಮಾಡುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಅಕ್ಕಿ ಖರೀದಿ ವಿಚಾರವಾಗಿ ಮಾತನಾಡಿದ ಸಚಿವ ಕೆ ಎಚ್​ ಮುನಿಯಪ್ಪ ಅವರು, ಮುಂದಿನ ಒಂದು ವಾರದಲ್ಲಿ ಅಕ್ಕಿ ಖರೀದಿ ಪೈನಲ್ ಆಗಲಿದೆ. ಆಂಧ್ರಪ್ರದೇಶ, ತೆಲಂಗಾಣ, ಛತ್ತೀಸ್​​ಗಢ ಸರ್ಕಾರ ಅಕ್ಕಿ ನೀಡಲು ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ಕೋಡುವ ಕೆಲಸ ಮಾಡುತ್ತೇವೆ ಎಂದರು.

ಇನ್ನು ಉಚಿತ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಪ್ರತಿಕ್ರಿಯಿಸಿದ ಸಚಿವ ಮುನಿಯಪ್ಪ, ದೇಶದಲ್ಲಿ ಶೇ. 35 ರಿಂದ 37 ರಷ್ಟು ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. ಯುಪಿಎ ಇದ್ದಾಗ ಆಹಾರ ಭದ್ರತಾ ಕಾಯ್ದೆ ತರಲಾಗಿತ್ತು. ಯಾರೂ ಕೂಡ ಕೆಲಸ ಇಲ್ಲದೆ ಮಲಗಬಾರದು ಅಂತ ನರೇಗಾ ಯೋಜನೆ ತಂದಿದ್ದೆವು. ಈ ಆಹಾರ ಭದ್ರತಾ ಕಾಯ್ದೆಯಿಂದ ಜನರಿಗೆ ಅನುಕೂಲ ಆಗುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT