ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಜಮೀನಿಗೆ ಹೋಗಿದ್ದ ಬಾಲಕನ ಮೇಲೆ ಹುಲಿ ದಾಳಿ, ಕೊಂದು ತಿಂದ ವ್ಯಾಘ್ರ!

ರಾಜ್ಯದಲ್ಲಿ ಮತ್ತೆ ಹುಲಿ ದಾಳಿ ಪ್ರಕರಣ ವರದಿಯಾಗಿದ್ದು ಮೈಸೂರಿನಲ್ಲಿ 7 ವರ್ಷದ ಬಾಲಕನೊಬ್ಬ ಹುಲಿ ದಾಳಿಗೆ ಬಲಿಯಾಗಿದ್ದಾನೆ.

ಮೈಸೂರು: ರಾಜ್ಯದಲ್ಲಿ ಮತ್ತೆ ಹುಲಿ ದಾಳಿ ಪ್ರಕರಣ ವರದಿಯಾಗಿದ್ದು ಮೈಸೂರಿನಲ್ಲಿ 7 ವರ್ಷದ ಬಾಲಕನೊಬ್ಬ ಹುಲಿ ದಾಳಿಗೆ ಬಲಿಯಾಗಿದ್ದಾನೆ. 

ಎಚ್ ಡಿ ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಬಾಲಕ ಚರಣ್ ನಾಯಕ್ ಎಂದು ತಿಳಿದುಬಂದಿದೆ. 

ತಂದೆ ಕೃಷ್ಣಾಕರ ಜೊತೆ ಚರಣ್ ನಾಯಕ್ ಜಮೀನಿಗೆ ತೆರಳಿದ್ದನು. ಜಮೀನಿನಲ್ಲಿ ಆಟ ಆಡಿ ಸುಸ್ತಾಗಿದ್ದ ಆತ ಮರದ ಕೆಳಗೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದನು. ಈ ವೇಳೆ ಹುಲಿ ದಾಳಿ ಮಾಡಿ ಕೂಗಳತೆ ದೂರಕ್ಕೆ ಬಾಲಕನನ್ನು ಎಳೆದೊಯ್ದು ಕೊಂದು ತಿಂದು ಹಾಕಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ದಾಳಿಯಿಂದ ಕಂಗಾಲಾಗಿರುವ ಪೋಷಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಾಲಕನ ಮೃತದೇಹ ತೆಗೆಯಲು ಕುಟುಂಬಸ್ಥರು ನಿರಾಕರಿಸಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT