ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಜಮೀನಿಗೆ ಹೋಗಿದ್ದ ಬಾಲಕನ ಮೇಲೆ ಹುಲಿ ದಾಳಿ, ಕೊಂದು ತಿಂದ ವ್ಯಾಘ್ರ!

ರಾಜ್ಯದಲ್ಲಿ ಮತ್ತೆ ಹುಲಿ ದಾಳಿ ಪ್ರಕರಣ ವರದಿಯಾಗಿದ್ದು ಮೈಸೂರಿನಲ್ಲಿ 7 ವರ್ಷದ ಬಾಲಕನೊಬ್ಬ ಹುಲಿ ದಾಳಿಗೆ ಬಲಿಯಾಗಿದ್ದಾನೆ.

ಮೈಸೂರು: ರಾಜ್ಯದಲ್ಲಿ ಮತ್ತೆ ಹುಲಿ ದಾಳಿ ಪ್ರಕರಣ ವರದಿಯಾಗಿದ್ದು ಮೈಸೂರಿನಲ್ಲಿ 7 ವರ್ಷದ ಬಾಲಕನೊಬ್ಬ ಹುಲಿ ದಾಳಿಗೆ ಬಲಿಯಾಗಿದ್ದಾನೆ. 

ಎಚ್ ಡಿ ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಬಾಲಕ ಚರಣ್ ನಾಯಕ್ ಎಂದು ತಿಳಿದುಬಂದಿದೆ. 

ತಂದೆ ಕೃಷ್ಣಾಕರ ಜೊತೆ ಚರಣ್ ನಾಯಕ್ ಜಮೀನಿಗೆ ತೆರಳಿದ್ದನು. ಜಮೀನಿನಲ್ಲಿ ಆಟ ಆಡಿ ಸುಸ್ತಾಗಿದ್ದ ಆತ ಮರದ ಕೆಳಗೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದನು. ಈ ವೇಳೆ ಹುಲಿ ದಾಳಿ ಮಾಡಿ ಕೂಗಳತೆ ದೂರಕ್ಕೆ ಬಾಲಕನನ್ನು ಎಳೆದೊಯ್ದು ಕೊಂದು ತಿಂದು ಹಾಕಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ದಾಳಿಯಿಂದ ಕಂಗಾಲಾಗಿರುವ ಪೋಷಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬಾಲಕನ ಮೃತದೇಹ ತೆಗೆಯಲು ಕುಟುಂಬಸ್ಥರು ನಿರಾಕರಿಸಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!