ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 
ರಾಜ್ಯ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ತಡೆಗೆ ಕ್ರಮ: AI ಆಧಾರಿತ 60 ಕ್ಯಾಮೆರಾ ಅಳವಡಿಕೆಗೆ ಮುಂದು

ಅಪಘಾತಗಳಿಂದಾಗಿ ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಅಧಿಕಾರಿಗಳು ಕ್ರಮಗಳ ಕೈಗೊಳ್ಳುತ್ತಿದ್ದು, ಇದರಂತೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ 60 ಭದ್ರತಾ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ.

ಬೆಂಗಳೂರು: ಅಪಘಾತಗಳಿಂದಾಗಿ ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಅಧಿಕಾರಿಗಳು ಕ್ರಮಗಳ ಕೈಗೊಳ್ಳುತ್ತಿದ್ದು, ಇದರಂತೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ 60 ಭದ್ರತಾ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ.

ಆರಂಭದಲ್ಲಿ, 118 ಕಿಲೋಮೀಟರ್ ಉದ್ದಕ್ಕೂ ಪ್ರತಿ 10 ಕಿಲೋಮೀಟರ್ ದೂರಕ್ಕೆ ಒಂದು ಕ್ಯಾಮೆರಾವನ್ನು ಅಳವಡಿಸಲು ಯೋಜಿಸಲಾಗಿತ್ತು. ಇದೀಗ ಪ್ರತಿ 2 ಕಿಮೀಗೆ ಒಂದರಂತೆ 60 ಕ್ಯಾಮೆರಾಗಳ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಈ ಹಿಂದೆಯೇ ಕ್ಯಾಮೆರಾಗಳ ಅಳವಡಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಹೆದ್ದಾರಿಯು NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ) ಅಡಿಯಲ್ಲಿ ಬರುವುದರಿಂದ ಅವರೇ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ. ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಟೆಂಡರ್ ಕರೆದು, ಕ್ಯಾಮೆರಾಗಳ ಅಳವಡಿಸಲಾಗುವುದು ಎಂದು ತಿಳಿಸಿದ್ದಾರೆ.

"AI ಕ್ಯಾಮೆರಾಗಳು ಅನುಮತಿಸಲಾದ ಗರಿಷ್ಠ ವೇಗದ ಮಿತಿಯನ್ನು ದಾಟುವ ವಾಹನಗಳನ್ನು ಗುರುತಿಸುವುದಲ್ಲದೆ, ನಿರ್ಬಂಧಿತ ವಾಹನಗಳು-ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳ ಪ್ರವೇಶವನ್ನೂ ಗುರುತಿಸುತ್ತದೆ. ಇದಲ್ಲದೆ, ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡುವುದು, ಸೀಟ್ ಬೆಲ್ಟ್ ಧರಿಸದಿರುವುದು, ಒನ್ ವೇ ಅಲ್ಲಿ ಬರುವ ವಾಹನಗಳನ್ನು ಗುರ್ತಿಸಿ, ರೆಕಾರ್ಡ್ ಮಾಡಿಕೊಳ್ಳುತ್ತದೆ.

ಬಳಿಕ ಸಂಚಾರ ನಿರ್ವಹಣಾ ಕೇಂದ್ರಗಳೊಂದಿಗೆ ಡೇಟಾವನ್ನು ಹಂಚಿಕೊಳ್ಳುತ್ತವೆ. ಬಳಿಕ ನಿಯಮ ಉಲ್ಲಂಘಿಸಿದವರ ವಿರುದ್ಧ ಮೋಟಾರು ವಾಹನ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಚಾಲಕರಿಗೆ ಇ-ಚಲನ್‌ಗಳನ್ನೂ ಕೂಡ ನೀಡಲಾಗುತ್ತದೆ. ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT