ಸಂಗ್ರಹ ಚಿತ್ರ 
ರಾಜ್ಯ

ವಿಮಾನದಲ್ಲಿ ಬೀಡಿ ಸೇದಿ ಕೆಲಕಾಲ ಆತಂಕ ಸೃಷ್ಟಿ: ಏರ್‌ಕ್ರಾಫ್ಟ್ ಕಾಯ್ದೆಯಡಿ ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬೀಡಿ ಸೇರಿದ ಹಿನ್ನೆಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಬೆಂಗಳೂರು: ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬೀಡಿ ಸೇರಿದ ಹಿನ್ನೆಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ವ್ಯಕ್ತಿಯ ವಿರುದ್ಧ ಏರ್‌ಕ್ರಾಫ್ಟ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಐಪಿಸಿ ಸೆಕ್ಷನ್ 336 ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಮತ್ತು ಸೆಕ್ಷನ್ 25 (3b) ಅಡಿಯಲ್ಲಿ ವಿಮಾನದೊಳಗೆ ಧೂಮಪಾನ ಮಾಡದಿರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಏರ್‌ಕ್ರಾಫ್ಟ್ ನಿಯಮಗಳು 1937 ರ ಅಡಿಯಲ್ಲಿ KIA ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.

ಜಿ ಕರುಣಾಕರನ್ ಎಂಬುವವರು ಸೆಪ್ಟೆಂಬರ್ 3 ರ ರಾತ್ರಿ 9.11 ಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ 6e 487 ವಿಮಾನದಲ್ಲಿ 24 A ಆಸನದಲ್ಲಿ ಕುಳಿತಿದ್ದರು. ಕೋಲ್ಕತ್ತಾದಿಂದ ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದ ನಂತರ ವಿಮಾನದ ಹಿಂಭಾಗದಲ್ಲಿ ಸುಡುವ ವಾಸನೆ ಬರುತ್ತಿರುವುದನ್ನು ಗಮನಿಸಿದ್ದಾರೆ.

ವಾಸನೆ ಶೌಚಾಲಯದಿಂದ ಹೊರಗಿನಿಂದ ಬರುತ್ತಿರುವುದಾಗಿ ತಿಳಿದುಬಂದಿದೆ. ಈ ವೇಳೆ ಬಾಗಿಲು ತಡ್ಡಿದ್ದಾರೆ. ಒಳಗಿದ್ದ ವ್ಯಕ್ತಿ ಬಾಗಿಲು ತೆಗೆದಿದ್ದು, ಕೈಯಲ್ಲಿ ಬೆಂಕಿಪೊಟ್ಟಣ ಇರುವುದು ಕಂಡು ಬಂದಿದೆ. ಅಲ್ಲದೆ, ಶೌಚಾಲಯದೊಳಗೆ ಬೀಡಿಯನ್ನು ಫ್ಲಶ್ ಮಾಡುವ ಪ್ರಯತ್ನ ಮಾಡುತ್ತಿರುವುದೂ ಕೂಡ ಕೂಡ ಕಂಡು ಬಂದಿದೆ. ಕೂಡಲೇ ಫ್ಲೈಟ್ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದಾರೆ.

ಬಳಿಕ ವಿಮಾನವು ಕೆಐಎ ತಲುಪಿದ ಕೂಡಲೇ ವ್ಯಕ್ತಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಇಂಡಿಗೋ ವಿಮಾನ 3 ಗಂಟೆ ವಿಳಂಬ, ನಾವೇನು ಭಿಕ್ಷುಕರಾ ಎಂದ ಪ್ರಯಾಣಿಕ
ಬೆಂಗಳೂರಿನಿಂದ ತೂತುಕುಡಿಗೆ ತೆರಳಬೇಕಿದ್ದ ಇಂಡಿಗೋ ವಿಮಾನ ಮೂರು ಗಂಟೆ 11 ನಿಮಿಷ ತಡವಾಗಿತ್ತು. ಸೋಮವಾರ ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆ 4.26ಕ್ಕೆ ಟೇಕಾಫ್ ಆಗಿದೆ. ವಿಮಾನ ತಡವಾಗಿ ಬರುವುದರಿಂದ ಟೇಕಾಫ್​ ತಡವಾಗಲಿದೆ ಎಂದು ಅನೌನ್ಸ್ ಮಾಡಲಾಯಿತು.

ಇದರಿಂದ ಬೇಸರಗೊಂಡ ಪ್ರಯಾಣಿಕ ಎಕ್ಸ್​ (ಟ್ವಿಟರ್)​ ಮೂಲಕ ವಿಮಾನಯಾನ ಸಚಿವಾಲಯಕ್ಕೆ ಟ್ಯಾಗ್​ ಮಾಡಿ ಮಧ್ಯಾಹ್ನ 1.15ಕ್ಕೆ ಹೊರಡಬೇಕಿದ್ದ ವಿಮಾನ ಸಂಜೆ 4.26ಕ್ಕೆ ಟೇಕಾಫ್ ಆಗಿದೆ. ಅಲ್ಲದೇ ನಮಗೆ ಅರ್ಧ ಸ್ಯಾಂಡ್​​​ವಿಚ್​​ ನೀಡಿ ನಮ್ಮನ್ನು ಭಿಕ್ಷುಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT