ಆರಗ ಜ್ಞಾನೇಂದ್ರ 
ರಾಜ್ಯ

ಬ್ರಿಟಿಷರಿಗೆ ಭಾರತ ಉಚ್ಚಾರಣೆ ಕಷ್ಟ ಆಗುತ್ತಿತ್ತು, ಹೀಗಾಗಿ ಇಂಡಿಯಾ ಎಂದರು: ಆರಗ ಜ್ಞಾನೇಂದ್ರ

ಬ್ರಿಟಿಷರಿಗೆ ಭಾರತ ಉಚ್ಚಾರಣೆ ಕಷ್ಟ ಆಗುತ್ತಿತ್ತು. ಹೀಗಾಗಿ ಭಾರತವನ್ನು ಇಂಡಿಯಾ ಎಂದು ಕರೆದರು. ಅದಕ್ಕೆ ಮಹತ್ವ ಇಲ್ಲ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ.

ಶಿವಮೊಗ್ಗ: ಬ್ರಿಟಿಷರಿಗೆ ಭಾರತ ಉಚ್ಚಾರಣೆ ಕಷ್ಟ ಆಗುತ್ತಿತ್ತು. ಹೀಗಾಗಿ ಭಾರತವನ್ನು ಇಂಡಿಯಾ ಎಂದು ಕರೆದರು. ಅದಕ್ಕೆ ಮಹತ್ವ ಇಲ್ಲ ಎಂದು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಅವರು ಬುಧವಾರ ಹೇಳಿದ್ದಾರೆ.

ಇಂಡಿಯಾ, ಭಾರತ ಹೆಸರಿನಲ್ಲಿ ವಿವಾದ, ಚರ್ಚೆ ಶುರು ಆದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಂಡಿಯಾ ಎನ್ನುವ ಹೆಸರಿಗೆ ಯಾವ ಹಿನ್ನಲೆಯೂ ಇಲ್ಲ. ಇಂಡಸ್ ವ್ಯಾಲ್ಯೂ ಇರುವ ಕಾರಣಕ್ಕೆ ಇಂಡಿಯಾ ಎಂಬ ಹೆಸರು ಬಂದಿದೆ. ಭಾರತ ಎಂದು ಉಚ್ಚಾರ ಮಾಡಲು ಬರದೇ ಇರುವ ಬ್ರಿಟೀಷರು ಕರೆದಿರುವ ಹೆಸರು ಅದು. ಅದಕ್ಕೆ ಮಹತ್ವ ಇಲ್ಲ ಎಂದು ಹೇಳಿದರು.

ಬ್ರಿಟೀಷರು ಹಾಗೂ ಮೊಘಲರ ಕಾಲದಲ್ಲಿ ಪರಿವರ್ತನೆ ಆಗಿತ್ತು. ಅದನ್ನು ಸರಿಪಡಿಸುವುದರ ಕುರಿತು ಇಂದು ಚರ್ಚೆಯಾಗುತ್ತಿದೆ. ಈಗಾಗಲೇ ಹಲವು ಊರಿನ ಹೆಸರು ಬದಲಾವಣೆ ಆಗಿದೆ. ಮದ್ರಾಸ್ ಈಗ ಚನ್ನೈ, ಬೆಂಗಳೂರ್ ಹೋಗಿ ಬೆಂಗಳೂರು, ಕೂರ್ಗ್ ಹೋಗಿ ಕೊಡಗು ಆಗಿದೆ ಎಂದು ತಿಳಿಸಿದರು.

ನಾವು ಭಾರತ್ ಮಾತಾ ಕಿ ಜೈ ಎನ್ನುತ್ತೇವೆ ಹೊರತು, ಇಂಡಿಯಾ ಮಾತಾ ಕಿ ಜೈ ಎನ್ನುವುದಿಲ್ಲ. ಹಾಗಾಗಿ ಸರ್ಕಾರ ಹೆಸರು ಬದಲಾವಣೆ ಮಾಡುವುದು ಖಂಡಿತ ಒಳ್ಳೆಯದು. ಈ ದೇಶ ಪರದೇಶಿ ಅಲ್ಲ, ಧರ್ಮಛತ್ರ ಅಲ್ಲ. ನಮ್ಮ ಪರಂಪರೆಯಲ್ಲಿ ಬಂದಿರುವ ಹೆಸರು. ಭಾರತ ಎಂಬ ಹೆಸರನ್ನು ಇಟ್ಟರೆ ದೇಶದ ವಿಷಯದಲ್ಲಿ ಭಾವನೆಗಳು ಬೆಳೆಯುತ್ತವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT