ಸೆರೆ ಸಿಕ್ಕ ಆನೆ 
ರಾಜ್ಯ

ಕೊಡಗು: ಅರಣ್ಯ ಸಿಬ್ಬಂದಿ ಗಿರೀಶ್ ಬಲಿ ಪಡೆದಿದ್ದ ಕಾಡಾನೆ ಸೆರೆ

ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಬುಧವಾರ ಕೊನೆಗೂ ಕೊಡಗಿನ ಮಡಿಕೇರಿ ತಾಲೂಕಿನ ಕೆದಕಲ್ ಸೀಮೆಯಲ್ಲಿ ಸೆರೆ ಹಿಡಿಯಲಾಗಿದೆ.

ಮಡಿಕೇರಿ: ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಬುಧವಾರ ಕೊನೆಗೂ ಕೊಡಗಿನ ಮಡಿಕೇರಿ ತಾಲೂಕಿನ ಕೆದಕಲ್ ಸೀಮೆಯಲ್ಲಿ ಸೆರೆ ಹಿಡಿಯಲಾಗಿದೆ.

ಸೆರೆ ಸಿಕ್ಕ ಆನೆ ಮಡಿಕೇರಿ ತಾಲೂಕಿನಾದ್ಯಂತ ಇತ್ತೀಚೆಗೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದು, ಕುಶಾಲನಗರ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನದಿಂದ ಇಂದು ಸೆರೆ ಸಿಕ್ಕಿದೆ.

ಕಳೆದ ಸೋಮವಾರ ಇಬ್ಬರು ಬೈಕ್ ಸವಾರರ ಮೇಲೆ ದಾಳಿ ಮಾಡಿದ ಈ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವವರು ಮೃತಪಟ್ಟಿದ್ದರು.

15 ರಿಂದ 20 ವರ್ಷದೊಳಗಿನ ಗಂಡು ಆನೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.

ನಿನ್ನೆಯಿಂದ ಈ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದ್ದು, ಇಂದು ಕಾಡಾನೆ ಸೆರೆ ಸಿಕ್ಕಿದೆ. ಇದು ಆರ್‌ಆರ್‌ಟಿ ಸಿಬ್ಬಂದಿಯ ಜೀವ ಬಲಿ ತೆಗೆದುಕೊಂಡ ಕಾಡು ಆನೆಯೇ ಎಂದು ನಮಗೆ ಇನ್ನೂ ಖಚಿತವಾಗಿಲ್ಲ. ಆದರೆ, ಕೆದಕಲ್ ಮತ್ತು ಮಡಿಕೇರಿ ವ್ಯಾಪ್ತಿಯಲ್ಲಿ ವರದಿಯಾದ ದಾಳಿಗಳಲ್ಲಿ ಈ ಆನೆ ಭಾಗಿಯಾಗಿದೆ ಎಂದು ಕುಶಾಲನಗರ ಡಿಆರ್‌ಎಫ್‌ಒ ರಂಜನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT