ಸೆರೆ ಸಿಕ್ಕ ಆನೆ 
ರಾಜ್ಯ

ಕೊಡಗು: ಅರಣ್ಯ ಸಿಬ್ಬಂದಿ ಗಿರೀಶ್ ಬಲಿ ಪಡೆದಿದ್ದ ಕಾಡಾನೆ ಸೆರೆ

ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಬುಧವಾರ ಕೊನೆಗೂ ಕೊಡಗಿನ ಮಡಿಕೇರಿ ತಾಲೂಕಿನ ಕೆದಕಲ್ ಸೀಮೆಯಲ್ಲಿ ಸೆರೆ ಹಿಡಿಯಲಾಗಿದೆ.

ಮಡಿಕೇರಿ: ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಕಾಡಾನೆಯನ್ನು ಬುಧವಾರ ಕೊನೆಗೂ ಕೊಡಗಿನ ಮಡಿಕೇರಿ ತಾಲೂಕಿನ ಕೆದಕಲ್ ಸೀಮೆಯಲ್ಲಿ ಸೆರೆ ಹಿಡಿಯಲಾಗಿದೆ.

ಸೆರೆ ಸಿಕ್ಕ ಆನೆ ಮಡಿಕೇರಿ ತಾಲೂಕಿನಾದ್ಯಂತ ಇತ್ತೀಚೆಗೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದು, ಕುಶಾಲನಗರ ವ್ಯಾಪ್ತಿಯ ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನದಿಂದ ಇಂದು ಸೆರೆ ಸಿಕ್ಕಿದೆ.

ಕಳೆದ ಸೋಮವಾರ ಇಬ್ಬರು ಬೈಕ್ ಸವಾರರ ಮೇಲೆ ದಾಳಿ ಮಾಡಿದ ಈ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವವರು ಮೃತಪಟ್ಟಿದ್ದರು.

15 ರಿಂದ 20 ವರ್ಷದೊಳಗಿನ ಗಂಡು ಆನೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಆನೆಯನ್ನು ದುಬಾರೆ ಆನೆ ಶಿಬಿರಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.

ನಿನ್ನೆಯಿಂದ ಈ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದ್ದು, ಇಂದು ಕಾಡಾನೆ ಸೆರೆ ಸಿಕ್ಕಿದೆ. ಇದು ಆರ್‌ಆರ್‌ಟಿ ಸಿಬ್ಬಂದಿಯ ಜೀವ ಬಲಿ ತೆಗೆದುಕೊಂಡ ಕಾಡು ಆನೆಯೇ ಎಂದು ನಮಗೆ ಇನ್ನೂ ಖಚಿತವಾಗಿಲ್ಲ. ಆದರೆ, ಕೆದಕಲ್ ಮತ್ತು ಮಡಿಕೇರಿ ವ್ಯಾಪ್ತಿಯಲ್ಲಿ ವರದಿಯಾದ ದಾಳಿಗಳಲ್ಲಿ ಈ ಆನೆ ಭಾಗಿಯಾಗಿದೆ ಎಂದು ಕುಶಾಲನಗರ ಡಿಆರ್‌ಎಫ್‌ಒ ರಂಜನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT