ಸಚಿವ ಶಿವಾನಂದ ಪಾಟೀಲ್ 
ರಾಜ್ಯ

ಪರಿಹಾರ ಪಡೆಯಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ: ಸಚಿವ ಶಿವಾನಂದ ಪಾಟೀಲ್

ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಮಂಗಳವಾರ ಹೇಳಿದ್ದು, ಈ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ.

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಮಂಗಳವಾರ ಹೇಳಿದ್ದು, ಈ ಹೇಳಿಕೆ ಇದೀಗ ವಿವಾದ ಸ್ವರೂಪ ಪಡೆದುಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಿವಾನಂದ ಪಾಟೀಲ್, ವೀರೇಶ್‌ ಕಮಿಟಿ ಬರುವ ಮುನ್ನ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆ ಇದ್ದವು. ಮೊದಲು ರೂ.2 ಲಕ್ಷ ಪರಿಹಾರ ಕೊಡಲಾಗುತ್ತಿತ್ತು. ಪರಿಹಾರ ಹೆಚ್ಚಳವಾದ ನಂತರ ಹೃದಯಾಘಾತ, ಪ್ರೇಮ ವೈಫಲ್ಯ, ಕುಡಿದು ಆತ್ಮಹತ್ಯೆ ಮಾಡಿಕೊಂಡ ಎಲ್ಲವನ್ನೂ ಪರಿಹಾರದ ಆಸೆಗಾಗಿ ‘ರೈತ ಆತ್ಮಹತ್ಯೆ’ ಪ್ರಕರಣ ಎಂದು ದಾಖಲಿಸಲಾಗುತ್ತಿದೆ. ಹೀಗೆ ದಾಖಲಾದ ಪ್ರಕರಣಗಳಲ್ಲಿ ಸತ್ಯಾಂಶ ಕಡಿಮೆ ಇರುವುದು ಗಮನಕ್ಕೆ ಬಂದಿದೆ.

ರಾಜ್ಯದಲ್ಲಿ 2020ರಲ್ಲಿ 500, 2021ರಲ್ಲಿ 595, 2022ರಲ್ಲಿ 651 ಹಾಗೂ 2023ರಲ್ಲಿ 412 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ನಿಜವಾದ ರೈತ ಆತ್ಮಹತ್ಯೆ ಪ್ರಕರಣಗಳಿಗೆ, ಪರಿಹಾರ ಕೊಡಲು ಸರ್ಕಾರ ಸಿದ್ಧವಿದೆ. ಹಾವೇರಿ ಜಿಲ್ಲೆಯಲ್ಲಿ 2022–23ನೇ ಸಾಲಿನಲ್ಲಿ 122 ಪ್ರಕರಣಗಳು ಹಾಗೂ 2023–24ನೇ ಸಾಲಿನಲ್ಲಿ 33 ಪ್ರಕರಣಗಳು ವರದಿಯಾಗಿವೆ. ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಇವತ್ತು ನಿನ್ನೆಯದಲ್ಲ. ಹಿಂದೆಯೂ ಆಗಿವೆ ಎಂದು ಹೇಳಿದರು.

ಎರಡು ವರ್ಷಗಳಲ್ಲಿ 53 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಇಲ್ಲಿಯವರೆಗೆ ಪರಿಹಾರ ಸಿಕ್ಕಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ‘ರೈತ ಆತ್ಮಹತ್ಯೆ ಪ್ರಕರಣಗಳಿಗೆ ಪರಿಹಾರ ನೀಡುತ್ತಿದ್ದೇವೆ. ಎಫ್‌ಐಆರ್‌ ಆದ ತಕ್ಷಣ ರೈತ ಆತ್ಮಹತ್ಯೆ ಎಂದು ವರದಿ ಮಾಡುವುದು ತಪ್ಪು. ಎಫ್‌ಎಸ್‌ಎಲ್‌ ವರದಿ ಬರುವವರೆಗೆ ಕಾಯದೇ, ವರದಿ ಮಾಡಿದರೆ ರೈತರಲ್ಲಿ ಆತಂಕ ಹೆಚ್ಚಾಗುತ್ತದೆ. ನೀವು ಜನರಿಗೆ ತಪ್ಪು ಮಾಹಿತಿ ನೀಡಬೇಡಿ' ಎಂದು ಮನವಿ ಮಾಡಿದರು.

ಈ ನಡುವೆ ಸಚಿವರ ಹೇಳಿಕೆ ರೈತರ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಕೂಡಲೇ ಶಿವಾನಂದ ಪಾಟೀಲ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಹಾವೇರಿಯ ರೈತ ಮುಖಂಡರೊಬ್ಬರು ಮಾತನಾಡಿ, ''ಶಿವಾನಂದ ಪಾಟೀಲರು ಸಚಿವರಾಗಿದ್ದು, ರೈತರ ಬಗ್ಗೆ ಹಗುರವಾಗಿ ಮಾತನಾಡಬಾರದು. ರೈತರು ಆತ್ಮಹತ್ಯೆಗೆ ಮುಂದಾಗುವುದನ್ನು ತಡೆಯಲು ಕ್ರಮಕೈಗೊಳ್ಳಬೇಕು. ಚುನಾಯಿತ ಪ್ರತಿನಿಧಿಯಾಗಿ ರೈತರ ಸಮಸ್ಯೆಗಳನ್ನು ನಿವಾರಿಸಲು ಸಚಿವರು ಸಹಾಯ ಮಾಡಬೇಕು. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.

ರೈತರ ಸಮಸ್ಯೆಗಳನ್ನು ಹಗುರವಾಗಿ ಪರಿಗಣಿಸಬಾರದು. ರಾಜ್ಯ ಸರ್ಕಾರ ಕೂಡಲೇ ಶಿವಾನಂದ ಪಾಟೀಲ್ ಅವರನ್ನು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತೇವೆಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT