ಮಂಗಳವಾರ ಮಳೆ ಸುರಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆಸಿ ರಸ್ತೆಯಲ್ಲಿ ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿರುವುದು. 
ರಾಜ್ಯ

ನೈಋತ್ಯ ಮಾನ್ಸೂನ್ ಮತ್ತೆ ಸಕ್ರಿಯ; ಈ ವಾರ ರಾಜ್ಯದಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ (ಮುಂಗಾರು) ಮತ್ತೆ ಚುರುಕು ಗೊಳ್ಳುತ್ತಿದ್ದು, ಈ ವಾರ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ (ಮುಂಗಾರು) ಮತ್ತೆ ಚುರುಕು ಗೊಳ್ಳುತ್ತಿದ್ದು, ಈ ವಾರ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಂಗಳವಾರ ರಾತ್ರಿ 8.30 ರವರೆಗೆ ನಗರದಲ್ಲಿ 18 ಮಿಮೀ ಮಳೆಯಾಗಿದ್ದು, ಈ ಪೈಕಿ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 15 ಮಿಮೀ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್ 8 ರವರೆಗೆ ಮಳೆಯಾಗಲಿದೆ. ಮುಂದಿನ 48 ಗಂಟೆಗಳ ಕಾಲ, ಉತ್ತರ ಒಳನಾಡು, ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಎ ಪ್ರಸಾದ್ ಅವರು ಹೇಳಿದ್ದಾರೆ.

IMD ನೀಡಿರುವ ಪ್ರಕಾರ, ಮಂಗಳವಾರ ರಾತ್ರಿ 8.30 ರವರೆಗೆ, ಸೇಡಂ (ಕಲಬುರಗಿ) 8 ಸೆಂಮೀ, ಬೀದರ್ 6 ಸೆಂಮೀ, ಕೋಟ (ಉಡುಪಿ) ಮತ್ತು ಚಿಂಚೋಳಿ (ಕಲಬುರಗಿ) ನಲ್ಲಿ ತಲಾ 5 ಸೆಂ.ಮೀ ಮಳೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮುಂದಿನ 24 ಗಂಟೆಗಳ ಕಾಲ ರಾಜ್ಯ ಕೆಲವು ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬೀದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಗೆ ಧರೆಗುರುಳಿದ ಮರಗಳು
ಈ ನಡುವೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಗೆ ನಾಲ್ಕು ಮರಗಳು ಧರೆಗುರುಳಿವೆ.

ಜೆಪಿ ನಗರ, ರಾಜರಾಜೇಶ್ವರಿ ನಗರ, ಎಚ್‌ಎಎಲ್ 2 ಹಂತಗಳಲ್ಲಿ ಮೂರು ಮರಗಳು ಉರುಳಿದ್ದರೆ, ಕೆಸಿ ಜನರಲ್ ಆಸ್ಪತ್ರೆ ಬಳಿ ಮತ್ತೊಂದು ಮರ ಧರೆಗುರುಳಿದೆ. ಪರಿಣಾಮ ದ್ವಿಚಕ್ರ ವಾಹನ ಹಾಗೂ ಕಾರಿಗೆ ಹಾನಿಯಾಗಿದೆ. ಈ ಸಂದರ್ಭದಲ್ಲಿ ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಕಾರು ಚಾಲಕ ಹಾಗೂ ಬೈಕ್ ಸವಾರ ಅದೃಷ್ಟವಶಾತ್ ಪಾರಾಗಿದ್ದಾರೆ. ಮಳೆಯ ಪರಿಣಾಮ ಥಣಿಸಂದ್ರದ ಎರಡು ರಸ್ತೆಗಳು ಸೇರಿದಂತೆ ನಗರದ ಹಲವು ರಸ್ತೆಗಳು ಜಲಾವೃತಗೊಂಡಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT