ಸಂಗ್ರಹ ಚಿತ್ರ 
ರಾಜ್ಯ

ಬ್ರ್ಯಾಂಡ್ ಬೆಂಗಳೂರು: 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೇ ಸಲ್ಲಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ

‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.

ಬೆಂಗಳೂರು: ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.

ನಿನ್ನೆಯಷ್ಟೇ ಬ್ರ್ಯಾಂಡ್ ಬೆಂಗಳೂರು ಸಮಾವೇಶ ಸಮಿತಿ ಅಧ್ಯಕ್ಷ ಜಯರಾಂ ರಾಯಪುರ ಅವರು, ನೋಡಲ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಲಾಗಿದೆ. ಅಲ್ಲದೆ, ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ನಾಗರಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನಿವಾಸಿ ಕ್ಷೇಮಾಭಿವೃದ್ಧಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಲಹೆ/ಅಭಿಪ್ರಾಯಗಳನ್ನು ಪಡೆಯಲಾಗಿದೆ.

ಸಾರ್ವಜನಿಕರಿಂದಲೂ ವೆಬ್ ಪೋರ್ಟಲ್ ಮೂಲಕ ಬೆಂಗಳೂರಿನ ಅಭಿವೃದ್ಧಿಗಾಗಿ 7 ವಿಷಯಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯ ಮತ್ತು ಸಲಹೆಗಳನ್ನು ಸ್ವೀಕರಿಸಲಾಗಿದೆ. ಬೆಂಗಳೂರನ್ನು ಜ್ಞಾನದ ನಗರವನ್ನಾಗಿಸುವ ನಿಟ್ಟಿನಲ್ಲಿ ‘ಶೈಕ್ಷಣಿಕ ಬೆಂಗಳೂರು’ ವಿಷಯದ ಬಗ್ಗೆ ಶಿಕ್ಷಣ ತಜ್ಞರ ಸಲಹೆ ಪಡೆಯಲಾಗಿದೆ. ಒಟ್ಟಾರೆ 8 ಪ್ರಮುಖ ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಸಂಬಂಧಿಸಿದ ಶೈಕ್ಷಣಿಕ ಪಾಲುದಾರ ಸಂಸ್ಥೆಗಳು ಕೂಡಲೇ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ 8 ವಿಷಯಗಳ ಕುರಿತಾಗಿ ಸಿದ್ದಪಡಿಸಿರುವ ವರದಿಗಳ ಆಧಾರದ ಮೇಲೆ 8 ಪ್ರತ್ಯೇಕ ಪ್ರ್ಯಾತ್ಯಕ್ಷಿಕೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಸ್ವೀಕೃತಿಗೊಂಡಿರುವ ಅಭಿಪ್ರಾಯಗಳ ಬಗ್ಗೆ ಹಾಗೂ ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸುವ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾವೇಶ ಏರ್ಪಡಿಸಲಾಗುವುದು. ಈ ಸಂಬಂಧ ಅಗತ್ಯವಿರುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT