ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತ ಗ್ರಾಹಕರೇ ಅಧಿಕವಾಗಿದ್ದ ಪಬ್ ಗಳ ಮೇಲೆ ಸಿಸಿಬಿ ದಾಳಿ

ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು:  ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೋರಮಂಗಲ, ಇಂದಿರಾನಗರ, ಹೆಚ್ಎಸ್ಆರ್ ಲೇಔಟ್, ಬಾಣಸವಾಡಿ, ಹೆಣ್ಣೂರು ಸೇರಿದಂತೆ ನಗರದ ಹಲವು ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಸುಮಾರು ಕಡೆಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳನ್ನು ಉಲ್ಲಂಘಿಸಲಾಗಿದೆ. 

ಅಪ್ರಾಪ್ತ ವಯಸ್ಸಿನವರಿಗೆ ಧೂಮಪಾನಕ್ಕೆ ಅವಕಾಶ, ಮದ್ಯ ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ. ಇದೇ ಸಂದರ್ಭದಲ್ಲಿ ಪಬ್ ಒಂದರಲ್ಲಿ ಪತ್ತೆಯಾದ ಅಪ್ರಾಪ್ತರು ನಾವು ಶಾಸಕರ ಕಡೆಯವರು, ಕಿರುತೆರೆ ಕಲಾವಿದರು ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗವೂ ನಡೆದಿದೆ.

ನಾಲ್ಕು ಕಡೆಗಳಲ್ಲಿ ಪಬ್ ಮಾಲೀಕರ ವಿರುದ್ಧ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ನಗರದ ಕೆಲವೆಡೆ ಕಾಲೇಜು ವಿದ್ಯಾರ್ಥಿಗಳು ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳತ್ತ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಎಂದು ಕೆಲ ಕಾಲೇಜು ಮುಖ್ಯಸ್ಥರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರಿಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರ ಸೂಚನೆಯ ಮೇರೆಗೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!