ರಾಜ್ಯ

ಹುಬ್ಬಳ್ಳಿ: 23 ಪಾರಿವಾಳಗಳ ಕುತ್ತಿಗೆ ಕೊಯ್ದು ಕೊಂದ ದುಷ್ಕರ್ಮಿಗಳು; ಹಳೆ ವೈಷಮ್ಯ ಕಾರಣ!

Ramyashree GN

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಹಳೆ ವೈಷಮ್ಯದಿಂದಾಗಿ ದುಷ್ಕರ್ಮಿಗಳು 23 ಪಾರಿವಾಳಗಳನ್ನು ಕೊಂದಿರುವ ಮನಕಲಕುವ ಘಟನೆ ನಡೆದಿದೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಯಾವಗಲ್ ಬಡಾವಣೆಯ ಮನೆಯೊಂದರಲ್ಲಿ ಶನಿವಾರ ಈ ಘಟನೆ ನಡೆದಿದೆ.

ಆರೋಪಿಗಳು ರಾಹುಲ್ ದಾಂಡೇಲಿ ಎಂಬುವರಿಗೆ ಸೇರಿದ ಪಾರಿವಾಳಗಳ ಕುತ್ತಿಗೆ ಕೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರು ದಾಂಡೇಲಿಯಲ್ಲಿ ಕಳೆದ ಆರು ತಿಂಗಳಿಂದ ಪಾರಿವಾಳಗಳನ್ನು ಸಾಕುತ್ತಿದ್ದರು. ದುಷ್ಕರ್ಮಿಗಳು ಅವರ ಮನೆಗೆ ನುಗ್ಗಿ ಕೃತ್ಯ ಎಸಗಿದ್ದಾರೆ. ಪಾರಿವಾಳದ ಗೂಡುಗಳನ್ನು ಸಹ ನಾಶಪಡಿಸಿದ್ದಾರೆ.

ಈ ಸಂಬಂಧ ಹುಬ್ಬಳ್ಳಿ ಉಪನಗರ ಠಾಣೆಗೆ ದೂರು ನೀಡಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರಬಹುದೆಂದು ಶಂಕಿಸಿದ್ದಾರೆ.

ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಮತ್ತು ಜನರ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

SCROLL FOR NEXT