ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣಗಳು ವರದಿಯಾಗಿವೆ, ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ, ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ, ಡೆಂಘಿ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದಿದ್ದಾರೆ.

 ಡೆಂಗ್ಯೂ ನಿಯಂತ್ರಣ ಮತ್ತು ಪರಿಣಾಮಕಾರಿ ಮೇಲ್ವಿಚಾರಣೆಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮತ್ತು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT