ನಳಿನ್ ಕುಮಾರ್ ಕಟೀಲ್ 
ರಾಜ್ಯ

ದೆಹಲಿಯ 'ಅಮೃತ ವನ' ನಿರ್ಮಾಣಕ್ಕೆ ದಕ್ಷಿಣ ಕನ್ನಡದಿಂದ ಮಣ್ಣನ್ನು ಕಳುಹಿಸಲಾಗುವುದು: ನಳಿನ್ ಕುಮಾರ್ ಕಟೀಲ್

ಮಂಗಳೂರಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ‘ದಕ್ಷಿಣ ಕನ್ನಡದ ಮಣ್ಣನ್ನು ಸಂಗ್ರಹಿಸಿ, ದೆಹಲಿಯ ಕರ್ತವ್ಯ ಪಥದಲ್ಲಿ ಹುತಾತ್ಮರ ಸ್ಮಾರಕ ಉದ್ಯಾನವನ 'ಅಮೃತ ವನ' ನಿರ್ಮಾಣಕ್ಕೆ ಕಳುಹಿಸಲಾಗುವುದು ಎಂದರು.

ಮಂಗಳೂರು: ಮಂಗಳೂರಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಿದ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ‘ದಕ್ಷಿಣ ಕನ್ನಡದ ಮಣ್ಣನ್ನು ಸಂಗ್ರಹಿಸಿ, ದೆಹಲಿಯ ಕರ್ತವ್ಯ ಪಥದಲ್ಲಿ ಹುತಾತ್ಮರ ಸ್ಮಾರಕ ಉದ್ಯಾನವನ 'ಅಮೃತ ವನ' ನಿರ್ಮಾಣಕ್ಕೆ ಕಳುಹಿಸಲಾಗುವುದು ಎಂದರು.

ಜಿಲ್ಲೆಯ ಮೂಲೆ ಮೂಲೆಯಿಂದ ಮಣ್ಣನ್ನು ಸಂಗ್ರಹಿಸಿ ದೆಹಲಿಗೆ ಕಳುಹಿಸಿ ಸ್ಮಾರಕ ಉದ್ಯಾನ ನಿರ್ಮಾಣ ಮಾಡುವ ಅಭಿಯಾನಕ್ಕೆ ದಕ್ಷಿಣ ಕನ್ನಡ ಜನತೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

'ಈ ಹಿಂದೆ, ಕೇಂದ್ರದ ಮಾಜಿ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಮರ್ಪಿಸಲಾದ ಏಕತಾ ಪ್ರತಿಮೆ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡದಾದ್ಯಂತ ಕಬ್ಬಿಣದ ತುಂಡುಗಳನ್ನು ಸಂಗ್ರಹಿಸಿ ಗುಜರಾತ್‌ಗೆ ಕಳುಹಿಸಲಾಯಿತು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾಗರಿಕರೂ ಕೈ ಜೋಡಿಸಿದ್ದರು. ಇದೀಗ 'ನನ್ನ ಮಣ್ಣು, ನನ್ನ ರಾಷ್ಟ್ರ' ಇಂತಹ ಮೂರನೇ ಅಭಿಯಾನವಾಗಿದ್ದು, ಇದರಲ್ಲಿ ಜನರು ಸಕ್ರಿಯವಾಗಿ ಭಾಗವಹಿಸುತ್ತಾರೆ. ಈಗ ನಾವು ಸ್ಮಾರಕ ಉದ್ಯಾನಕ್ಕಾಗಿ ನಮ್ಮ ಜಿಲ್ಲೆಯಿಂದ ಮಣ್ಣು ಸಂಗ್ರಹಿಸುತ್ತೇವೆ ಮತ್ತು ಆ ಮೂಲಕ ತಮ್ಮ ಪ್ರಾಣ ತ್ಯಾಗ ಮಾಡಿ, ನಮ್ಮ ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಿದ ನಮ್ಮ ಜಿಲ್ಲೆಯ ಹುತಾತ್ಮರನ್ನು ಸ್ಮರಿಸುತ್ತೇವೆ ಎಂದು ಅವರು ಹೇಳಿದರು.

ಮುಂದಿನ 25 ವರ್ಷಗಳಲ್ಲಿ ಭಾರತವು ವಿಶ್ವದ ಅಗ್ರ ರಾಷ್ಟ್ರಗಳಲ್ಲಿ ಒಂದಾಗಲಿದೆ ಎಂದು ಅವರು ಹೇಳಿದರು. 

ಕದ್ರಿ ಮಂಜುನಾಥ, ಮಂಗಳಾದೇವಿ, ಸೋಮನಾಥೇಶ್ವರ, ಕುದ್ರೋಳಿ ಗೋಕರ್ಣ, ಶರವು ಮಹಾಗಣಪತಿ ದೇವಸ್ಥಾನಗಳ ಆವರಣದಿಂದ ಸಂಗ್ರಹಿಸಿದ ಮಣ್ಣನ್ನು ಸುರಿಯುವ ಮೂಲಕ ಬಿಜೆಪಿ ಮುಖಂಡರು ಪ್ರಚಾರಕ್ಕೆ ಚಾಲನೆ ನೀಡಿದರು. 

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಹುತಾತ್ಮ ಯೋಧರಿಗಾಗಿ ಈ ವಿಶಿಷ್ಟ ಉದ್ಯಾನ ನಿರ್ಮಿಸಲು ದೇಶದ ನಾಗರಿಕರು ಕೈಜೋಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ ಎಂದರು. 

ಎಂಎಲ್‌ಸಿ ಕೆ ಪ್ರತಾಪಸಿಂಹ ನಾಯಕ್ ಮಾತನಾಡಿ, ಈ ಅಭಿಯಾನವು ಯುವಜನರಲ್ಲಿ ದೇಶದ ಶ್ರೀಮಂತ ಪರಂಪರೆ ಮತ್ತು ಹುತಾತ್ಮರ ತ್ಯಾಗದ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT