ಕ್ಯಾಪ್ಸುಲ್‌ಗಳಲ್ಲಿ ತುಂಬಿರುವ ಕೊಕೇನ್ 
ರಾಜ್ಯ

12 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಣೆಗೆ ಯತ್ನ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾದ ಮಹಿಳೆ ಬಂಧನ

ಸೋಮವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

ಬೆಂಗಳೂರು: ಸೋಮವಾರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.

ಆರೋಪಿಯನ್ನು ಅಜೆಂಗ್ ಓ ಕ್ಯಾರೋಲಿನ್ ಅಗೋಲಾ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಖಾಸಗಿ ಭಾಗಗಳು ಮತ್ತು ಒಳ ಉಡುಪುಗಳಲ್ಲಿ ಕ್ಯಾಪ್ಸುಲ್‌ಗಳ ರೂಪದಲ್ಲಿದ್ದ ನಿಷಿದ್ಧ ವಸ್ತುವನ್ನು ಬಚ್ಚಿಟ್ಟಿದ್ದಳು. ಆಕೆಯ ವಿರುದ್ಧ  'ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ (ಎನ್‌ಡಿಪಿಎಸ್‌) ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಕೆಯು ಅಡಿಸ್ ಅಬಾಬಾದಿಂದ ಇಥಿಯೋಪಿಯನ್ ಏರ್‌ಲೈನ್ಸ್ ವಿಮಾನದಲ್ಲಿ (ಇಟಿ 690) ಪ್ರಯಾಣ ಬೆಳೆಸಿದ್ದರು. ಅದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 11.09ಕ್ಕೆ ತಲುಪಿತ್ತು.

ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಸಿಐಎಸ್ಎಫ್ ಪೊಲೀಸ್ ಲಕ್ಷ್ಮಿ ಮೀನಾ ಅವರು ಅಗೋಲಾರನ್ನು ಪರೀಕ್ಷಿಸುವಾಗ ಅನುಮಾನಗೊಂಡಿದ್ದಾರೆ. ಬಳಿಕ 'ಆಕೆಯನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದರು ಮತ್ತು ಆಕೆಯ ಬಟ್ಟೆಯನ್ನು ತೆಗೆಯುವಂತೆ ಹೇಳಿದ್ದಾರೆ. ಈ ವೇಳೆ ಒಳ ಉಡುಪುಗಳಲ್ಲಿ ಅನೇಕ ಕ್ಯಾಪ್ಸುಲ್‌ಗಳು ಕಂಡುಬಂದಿವೆ. ಕ್ಯಾಪ್ಸುಲ್‌ಗಳಲ್ಲಿ ಒಂದನ್ನು ತೆರೆಯಲಾಗಿತ್ತು ಮತ್ತು ಆಕೆ ಉತ್ತಮ ಗುಣಮಟ್ಟದ ಕೊಕೇನ್ ಸಾಗಿಸುತ್ತಿದ್ದಳು ಎಂಬುದು ತಿಳಿಯಿತು' ಎಂದು ಮೂಲಗಳು ತಿಳಿಸಿವೆ.

ಮೊದಲಿಗೆ ಅಗೋಲಾಳನ್ನು ಆಸ್ಟರ್ ಮೆಡಿಕಲ್ ಸೆಂಟರ್‌ಗೆ ಕರೆದೊಯ್ಯಲಾಗಿದ್ದು, ಸಂಪೂರ್ಣ ತಪಾಸಣೆಯ ನಂತರ, ಆಕೆಯ ಖಾಸಗಿ ಭಾಗಗಳಲ್ಲಿ ಹೆಚ್ಚಿನ ಕ್ಯಾಪ್ಸುಲ್‌ಗಳನ್ನು ಮರೆಮಾಡಿರುವುದನ್ನು ವೈದ್ಯಕೀಯ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. 'ವಿಚಾರಣೆ ವೇಳೆ, ಆಕೆ ಕೆಲವು ಕ್ಯಾಪ್ಸುಲ್‌ಗಳನ್ನು ನುಂಗಿರುವುದಾಗಿ ಒಪ್ಪಿಕೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ, ಆಕೆಯ ಹೊಟ್ಟೆಯ ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಲಾಯಿತು' ಎಂದು ಮತ್ತೊಂದು ಮೂಲವು ತಿಳಿಸಿದೆ. ಪತ್ತೆಯಾದ ಕ್ಯಾಪ್ಸುಲ್‌ಗಳ ಸಂಖ್ಯೆ ಎಷ್ಟೆಂಬ ಮಾಹಿತಿ ತಿಳಿದುಬಂದಿಲ್ಲ.

'ಕೊಕೇನ್ ಅತ್ಯಂತ ಉತ್ತಮ ಗುಣಮಟ್ಟದ್ದಾಗಿದೆ ಮತ್ತು ಸುಮಾರು 12 ಕೋಟಿ ರೂ. ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ' ಎಂದು ಮಾದಕವಸ್ತುಗಳ ಪರಿಚಯವಿರುವ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. 'ವಶಪಡಿಸಿಕೊಂಡ ವಸ್ತುವನ್ನು ಎನ್‌ಸಿಬಿಗೆ ಹಸ್ತಾಂತರಿಸಲಾಗಿದೆ' ಎಂದು ಅವರು ಹೇಳಿದರು. 

ಆಕೆ ಸ್ವಂತವಾಗಿ ಕಾರ್ಯನಿರ್ವಹಿಸುತ್ತಿದ್ದಾಳೋ ಅಥವಾ ಯಾವುದಾದರೂ ದಂಧೆಯ ಭಾಗವಾಗಿದ್ದಾರೋ ಎಂಬುದನ್ನು ಪತ್ತೆಹಚ್ಚಲು ವಿಚಾರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT