ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಕರೆ ನೀಡಲಾಗಿದ್ದ ಬಂದ್‌ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಖಾಸಗಿ ಬಸ್ಸುಗಳು. (ಫೊಟೋ-ಪಿಟಿಐ) 
ರಾಜ್ಯ

ಬೆಂಗಳೂರು: ಬಂದ್ ನಡುವೆಯೂ ರಸ್ತೆಗಿಳಿದ ಕ್ಯಾಬ್ ಚಾಲಕರ ಮೇಲೆ ಪ್ರತಿಭಟನಾಕಾರರ ಹಲ್ಲೆ; ಕ್ರಮಕ್ಕೆ ಆಗ್ರಹ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಅನ್ನು ಧಿಕ್ಕರಿಸಿ ಆಟೋ ಮತ್ತು ಕ್ಯಾಬ್ ಚಲಾಯಿಸಿದ ಚಾಲಕರ ಮೇಲೆ ಪ್ರತಿಭಟನಾನಿರತು ಹಲ್ಲೆ ನಡೆಸಿ, ನಿಂದಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಅನ್ನು ಧಿಕ್ಕರಿಸಿ ಆಟೋ ಮತ್ತು ಕ್ಯಾಬ್ ಚಲಾಯಿಸಿದ ಚಾಲಕರ ಮೇಲೆ ಪ್ರತಿಭಟನಾನಿರತರು ಹಲ್ಲೆ ನಡೆಸಿ, ನಿಂದಿಸಿದ್ದಾರೆ.

ನಗರದ ವಿವಿಧ ಪ್ರದೇಶಗಳಲ್ಲಿ ನಡೆದ ಹಲ್ಲೆಯ ಹಲವಾರು ವಿಡಿಯೋಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ದೃಶ್ಯದಲ್ಲಿ, ಪ್ರತಿಭಟನಾಕಾರರು ಆಟೋ ಮತ್ತು ಕ್ಯಾಬ್ ಅನ್ನು ತಡೆದು, ಟೈರ್‌ಗಳ ಗಾಳಿ ಬಿಡುವುದು ಮತ್ತು ಖಾಸಗಿ ವಾಹನಗಳಿಗೆ ಹಾನಿಯುಂಟು ಮಾಡುತ್ತಿರುವುದು ಕಂಡುಬಂದಿದೆ.

ಸಂಬಂಧ ಬೆಂಗಳೂರು ನಗರ ಪೊಲೀಸರು ಒಟ್ಟು 13 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 12 ಮಂದಿಯನ್ನು ಬಂಧಿಸಿದ್ದಾರೆ. 
ಬಂದ್‌ನಲ್ಲಿ ಭಾಗವಹಿಸುವಂತೆ ಚಾಲಕರನ್ನು ಒತ್ತಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ ನಂತರವೂ, ಪ್ರತಿಭಟನಾಕಾರರು ಜನರ ಮೇಲೆ ಹಲ್ಲೆ ನಡೆಸಿ, ವಾಹನಗಳಿಗೆ ಹಾನಿ ಮಾಡಿದ ಹಲವಾರು ನಿದರ್ಶನಗಳು ವರದಿಯಾಗಿವೆ.

ಔಟರ್ ರಿಂಗ್ ರೋಡ್ ಕಂಪನಿಗಳ ಅಸೋಸಿಯೇಷನ್ ​​ಪೋಸ್ಟ್ ಮಾಡಿರುವ ವಿಡಿಯೋದಲ್ಲಿ, ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಸೆರೆಯಾಗಿದೆ. ಮೂವರಿದ್ದ ಗುಂಪೊಂದು ಕ್ಯಾಬ್ ಅನ್ನು ನಿಲ್ಲಿಸಿ, ಅದರ ಮೇಲೆ ಕಲ್ಲು ತೂರಾಟ ನಡೆಸಿದೆ. ಇದೇ ರೀತಿಯ ಘಟನೆ ಎಸ್‌ಜೆ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರತಿಭಟನಾಕಾರರು ರಾಪಿಡೋ ಬೈಕ್ ಸವಾರನೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಕಲ್ಲು ತೂರಾಟ ನಡೆಸಿದ್ದಾರೆ.

ಹಲ್ಲೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಔಟರ್ ರಿಂಗ್ ರೋಡ್ ಕಂಪನಿಗಳ ಅಸೋಸಿಯೇಷನ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT