ಕರ್ನಾಟಕದಲ್ಲಿರುವ ಅಂಚೆ ಕಚೇರಿ 
ರಾಜ್ಯ

ಮನೆ ಬಾಗಿಲಿಗೆ ಬರಲಿದೆ ಜೀವನದಿ ಕಾವೇರಿ ತೀರ್ಥ ಪೂರೈಕೆ; ಅಂಚೆ ಇಲಾಖೆ ಯೋಜನೆ!

ತಲಕಾವೇರಿಯ ‘ಬ್ರಹ್ಮಕುಂಡಿಕೆ’ಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ ಸಹಯೋಗದೊಂದಿಗೆ ಕೇವಲ 300 ರೂ. ಗಳಲ್ಲಿ ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ.

ದಾವಣಗೆರೆ: ತಲಕಾವೇರಿಯ ‘ಬ್ರಹ್ಮಕುಂಡಿಕೆ’ಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಪಡೆಯಲು ಜನರು ಇನ್ಮುಂದೆ 'ತುಲಾ ಸಂಕ್ರಮಣ' ದಿನದಂದು ತಲಕಾವೇರಿಗೆ ಧಾವಿಸುವ ಅಗತ್ಯವಿಲ್ಲ. ಏಕೆಂದರೆ, ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ ಸಹಯೋಗದೊಂದಿಗೆ ಕೇವಲ 300 ರೂ. ಗಳಲ್ಲಿ ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ‘ಶ್ರೀ ತಲಕಾವೇರಿ ದೇವಸ್ಥಾನದ ಪ್ರಸಾದ’ವನ್ನು ತಲುಪಿಸಲಿದೆ.

ಯಾವುದೇ ಅಂಚೆ ಕಚೇರಿಯಲ್ಲಿ ಇ-ಪಾವತಿ ಮೂಲಕ ಮೊತ್ತವನ್ನು ಪಾವತಿಸಿದರೆ, ಭಕ್ತರು ತಮ್ಮ ಮನೆ ಬಾಗಿಲಿನಲ್ಲೇ ಪ್ರಸಾದವನ್ನು ಪಡೆಯಬಹುದು. ಈ ಪ್ರಸಾದವನ್ನು ಭಾರತೀಯ ಅಂಚೆ ಜಾಲದ ಅಂಚೆ ಕಚೇರಿ ಶಾಖೆಯ ಮೂಲಕ ಯಾವುದೇ ದೂರದ ಮನೆಗಳಿಗೆ ಹಸ್ತಾಂತರಿಸಲಾಗುತ್ತದೆ.

ಈ ಕುರಿತು ಅಂಚೆ ಕಚೇರಿಗಳ ದಾವಣಗೆರೆ ವಿಭಾಗದ ಅಧೀಕ್ಷಕ ಚಂದ್ರಶೇಖರ್ ಟಿಎನ್‌ಐಇ ಜೊತೆಗೆ ಮಾತನಾಡಿ, 'ಭಾರತೀಯ ಅಂಚೆ ಇಲಾಖೆ ಕೈಗೊಂಡಿರುವ ಕಾರ್ಯಕ್ರಮದ ಅಡಿಯಲ್ಲಿ ನಾವು ಭಕ್ತರ ಮನೆ ಬಾಗಿಲಿಗೆ ಪ್ರಸಾದವನ್ನು ಪೂರೈಸುತ್ತಿದ್ದೇವೆ. ಮಂಗಳಕರವಾದ ‘ತುಲಾ ಸಂಕ್ರಮಣ’ದ ಮಹತ್ವವನ್ನು ಅರ್ಥಮಾಡಿಕೊಂಡು, ಭಾರತೀಯ ಅಂಚೆಯು ಭಕ್ತರಿಗೆ ಕಾವೇರಿ ತೀರ್ಥವನ್ನು ಪೂರೈಸುವ ಉಪಕ್ರಮವನ್ನು ತೆಗೆದುಕೊಂಡಿದೆ' ಎಂದು ಅವರು ಹೇಳಿದರು.

ಇದಲ್ಲದೆ, ಭಕ್ತರು ಪ್ರಸಾದವನ್ನು ಕಾಯ್ದಿರಿಸಲು ಹತ್ತಿರದ ಉಪ ಅಂಚೆ ಕಚೇರಿಗಳು ಅಥವಾ ದಾವಣಗೆರೆ ಪ್ರಧಾನ ಅಂಚೆ ಕಚೇರಿಗೆ ಬರಬೇಕು. ನಂತರ ನಮ್ಮ ಪೋಸ್ಟ್‌ಮ್ಯಾನ್‌ಗಳು ಅವರ ಮನೆ ಬಾಲಿಗೆಗೆ ಪ್ರಸಾದವನ್ನು ತಲುಪಿಸಲಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT