ಕರ್ನಾಟಕದಲ್ಲಿರುವ ಅಂಚೆ ಕಚೇರಿ 
ರಾಜ್ಯ

ಮನೆ ಬಾಗಿಲಿಗೆ ಬರಲಿದೆ ಜೀವನದಿ ಕಾವೇರಿ ತೀರ್ಥ ಪೂರೈಕೆ; ಅಂಚೆ ಇಲಾಖೆ ಯೋಜನೆ!

ತಲಕಾವೇರಿಯ ‘ಬ್ರಹ್ಮಕುಂಡಿಕೆ’ಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ ಸಹಯೋಗದೊಂದಿಗೆ ಕೇವಲ 300 ರೂ. ಗಳಲ್ಲಿ ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ.

ದಾವಣಗೆರೆ: ತಲಕಾವೇರಿಯ ‘ಬ್ರಹ್ಮಕುಂಡಿಕೆ’ಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಪಡೆಯಲು ಜನರು ಇನ್ಮುಂದೆ 'ತುಲಾ ಸಂಕ್ರಮಣ' ದಿನದಂದು ತಲಕಾವೇರಿಗೆ ಧಾವಿಸುವ ಅಗತ್ಯವಿಲ್ಲ. ಏಕೆಂದರೆ, ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ ಸಹಯೋಗದೊಂದಿಗೆ ಕೇವಲ 300 ರೂ. ಗಳಲ್ಲಿ ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ‘ಶ್ರೀ ತಲಕಾವೇರಿ ದೇವಸ್ಥಾನದ ಪ್ರಸಾದ’ವನ್ನು ತಲುಪಿಸಲಿದೆ.

ಯಾವುದೇ ಅಂಚೆ ಕಚೇರಿಯಲ್ಲಿ ಇ-ಪಾವತಿ ಮೂಲಕ ಮೊತ್ತವನ್ನು ಪಾವತಿಸಿದರೆ, ಭಕ್ತರು ತಮ್ಮ ಮನೆ ಬಾಗಿಲಿನಲ್ಲೇ ಪ್ರಸಾದವನ್ನು ಪಡೆಯಬಹುದು. ಈ ಪ್ರಸಾದವನ್ನು ಭಾರತೀಯ ಅಂಚೆ ಜಾಲದ ಅಂಚೆ ಕಚೇರಿ ಶಾಖೆಯ ಮೂಲಕ ಯಾವುದೇ ದೂರದ ಮನೆಗಳಿಗೆ ಹಸ್ತಾಂತರಿಸಲಾಗುತ್ತದೆ.

ಈ ಕುರಿತು ಅಂಚೆ ಕಚೇರಿಗಳ ದಾವಣಗೆರೆ ವಿಭಾಗದ ಅಧೀಕ್ಷಕ ಚಂದ್ರಶೇಖರ್ ಟಿಎನ್‌ಐಇ ಜೊತೆಗೆ ಮಾತನಾಡಿ, 'ಭಾರತೀಯ ಅಂಚೆ ಇಲಾಖೆ ಕೈಗೊಂಡಿರುವ ಕಾರ್ಯಕ್ರಮದ ಅಡಿಯಲ್ಲಿ ನಾವು ಭಕ್ತರ ಮನೆ ಬಾಗಿಲಿಗೆ ಪ್ರಸಾದವನ್ನು ಪೂರೈಸುತ್ತಿದ್ದೇವೆ. ಮಂಗಳಕರವಾದ ‘ತುಲಾ ಸಂಕ್ರಮಣ’ದ ಮಹತ್ವವನ್ನು ಅರ್ಥಮಾಡಿಕೊಂಡು, ಭಾರತೀಯ ಅಂಚೆಯು ಭಕ್ತರಿಗೆ ಕಾವೇರಿ ತೀರ್ಥವನ್ನು ಪೂರೈಸುವ ಉಪಕ್ರಮವನ್ನು ತೆಗೆದುಕೊಂಡಿದೆ' ಎಂದು ಅವರು ಹೇಳಿದರು.

ಇದಲ್ಲದೆ, ಭಕ್ತರು ಪ್ರಸಾದವನ್ನು ಕಾಯ್ದಿರಿಸಲು ಹತ್ತಿರದ ಉಪ ಅಂಚೆ ಕಚೇರಿಗಳು ಅಥವಾ ದಾವಣಗೆರೆ ಪ್ರಧಾನ ಅಂಚೆ ಕಚೇರಿಗೆ ಬರಬೇಕು. ನಂತರ ನಮ್ಮ ಪೋಸ್ಟ್‌ಮ್ಯಾನ್‌ಗಳು ಅವರ ಮನೆ ಬಾಲಿಗೆಗೆ ಪ್ರಸಾದವನ್ನು ತಲುಪಿಸಲಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!