ಪ್ರತಿಭಟನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಬೆಂಬಲ, ಗೃಹ ಸಚಿವ ಡಾ. ಜಿ. ಪರಮೇಶ್ವರ್ 
ರಾಜ್ಯ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅನುಮತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ, ಗೃಹ ಸಚಿವರು ಹೇಳಿದ್ದು ಹೀಗೆ...

ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. 

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. 

ಶಾಸಕ ಮಹೇಶ ಟೆಂಗಿನಕಾಯಿ ಕೂಡಾ ಇಂದು ಪ್ರತಿಭಟನಾಕಾರರೊಂದಿಗೆ ಧರಣಿಯಲ್ಲಿ ಕುಳಿತು ಬೆಂಬಲ ವ್ಯಕ್ತಪಡಿಸಿದರು. ಸರ್ಕಾರ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಗಸ್ಟ್ 31ರಂದೇ ಠರಾವು ಪಾಸಾಗಿದೆ. ಆದರೆ, ಪಾಲಿಕೆ ಆಯುಕ್ತರು ಈವರೆಗೂ ಅನುಮತಿ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಈಗಾಗಲೇ ಸಮಸ್ತ ಹಿಂದೂ ಸಮಾಜ ನಿರ್ಣಯ ತೆಗೆದುಕೊಂಡಿದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡೇ ಮಾಡುತ್ತೇವೆ. ಯಾವುದಕ್ಕೂ ಬಗ್ಗುವುದಿಲ್ಲ ಎಂದರು. 

ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವುದನ್ನು ಸ್ಥಳೀಯ ಆಡಳಿತಕ್ಕೆ ಬಿಟ್ಟಿದ್ದೇವೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ - ಅಮೆರಿಕ ಒಪ್ಪಂದ ನಮ್ಮ ರೈತರ ಹಿತಾಸಕ್ತಿ ರಕ್ಷಿಸುತ್ತದೆ; ರಷ್ಯಾ ತೈಲ ಖರೀದಿ ಬಗ್ಗೆ MEA ಮಾಹಿತಿ: ಗೋಯಲ್

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

ಪಶ್ಚಿಮ ಬಂಗಾಳ: SIRನಲ್ಲಿ ಬಿಜೆಪಿ ಹಸ್ತಕ್ಷೇಪದ ವಿರುದ್ಧ 'ಡೆಡ್' ಮತದಾರರಿಂದ ಪ್ರತಿಭಟನೆ!

ವಿದ್ರಾವಕ: 20 ರೂ ಪ್ರಕರಣ, 30 ವರ್ಷ ಜೈಲು, ನಿರಪರಾಧಿ ಎಂದು ತೀರ್ಪು ಬಂದ ಮಾರನೇ ದಿನವೇ ಸಾವು!

Chhattisgarh: 51 ನಕ್ಸಲರ ಸಾಮೂಹಿಕ ಶರಣಾಗತಿ, 34 ಮಂದಿ ಮಹಿಳೆಯರು!

SCROLL FOR NEXT