ಮಾದಕ ವಸ್ತುಗಳ ವಶ 
ರಾಜ್ಯ

ಬೆಂಗಳೂರಿನಲ್ಲಿ 7.83 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ: ವಿದೇಶಿಗರು ಸೇರಿ 14 ಡ್ರಗ್ ಪೆಡ್ಲರ್‌ಗಳ ಬಂಧನ!

ವಿದೇಶಿ ಪ್ರಜೆಗಳು ಮತ್ತು ಇತರ ರಾಜ್ಯದವರು ಸೇರಿದಂತೆ 14 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, 7.83 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ತಿಳಿಸಿದೆ.

ಬೆಂಗಳೂರು: ವಿದೇಶಿ ಪ್ರಜೆಗಳು ಮತ್ತು ಇತರ ರಾಜ್ಯದವರು ಸೇರಿದಂತೆ 14 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, 7.83 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ತಿಳಿಸಿದೆ.

ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರು, ಬನಶಂಕರಿ, ವಿದ್ಯಾರಣ್ಯಪುರ, ಕಾಟನ್‌ಪೇಟೆ ಮತ್ತು ಕಾಡುಗೋಡಿಯಲ್ಲಿ ಕಳೆದ ಒಂದು ವಾರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದವು.

ಈ ಪ್ರಕರಣಗಳಲ್ಲಿ ಒಟ್ಟು 14 ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಲಾಗಿದ್ದು, ಇದರಲ್ಲಿ ಮೂವರು ವಿದೇಶಿ ಪ್ರಜೆಗಳು, ಒರಿಸ್ಸಾ ಮತ್ತು ಕೇರಳದ ತಲಾ ನಾಲ್ವರು ಮತ್ತು ಬೆಂಗಳೂರಿನ ಮೂವರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವರಿಂದ ಅಂದಾಜು 7,83,70,000 ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 182 ಕೆಜಿ ಗಾಂಜಾ, 1.450 ಕೆಜಿ ಹ್ಯಾಶಿಶ್ ಆಯಿಲ್, 16.2 ಗ್ರಾಂ ಎಂಡಿಎಂಎ, 135 ಎಕ್ಸ್‌ಟಸಿ ಮಾತ್ರೆಗಳು, 1 ಕೆಜಿ ಮೆಫೆಡ್ರಾನ್ ವೈಟ್ ಪೌಡರ್, 1 ಕೆಜಿ ಮೆಫೆಡ್ರಾನ್ ವೈಟ್ ಪೌಡರ್, 880 ಗ್ರಾಂ ಕೊಕೇನ್, 230 ಗ್ರಾಂ ಎಂಡಿಎಂಎ ಎಕ್ಸ್ಟಸಿ ಪೌಡರ್ ವಶಪಡಿಸಿಕೊಳ್ಳಲಾಗಿದೆ.

ಅಲ್ಲದೆ, ಎಂಟು ಮೊಬೈಲ್ ಫೋನ್‌ಗಳು, ಎರಡು ಕಾರುಗಳು, ಒಂದು ಸ್ಕೂಟರ್ ಮತ್ತು ತೂಕದ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT