ಸಾಂದರ್ಭಿಕ ಚಿತ್ರ 
ರಾಜ್ಯ

ರಾಜಕಾಲುವೆ ಒತ್ತುವರಿ ಮಾಡಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ? ಹಾಗಾದರೆ ಫೋಟೋ ಸಮೇತ ಈ ಕಚೇರಿಗಳಿಗೆ ದೂರು ನೀಡಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.

ರಾಜಕಾಲುವೆ ಒತ್ತುವರೆ ಮಾಡಿ ಅಲ್ಲಿ ಕಟ್ಟಡ ನಿರ್ಮಿಸಿರುವುದು ಯಾರಿಗಾದರೂ ತಿಳಿದಿದ್ದರೆ ಅಥವಾ ಗಮನಕ್ಕೆ ಬಂದರೆ ವಲಯಗಳ ಈ ನಿರ್ದಿಷ್ಟ ಕಚೇರಿಗಳ ಅಧಿಕಾರಿಗಳಿಗೆ ದೂರನ್ನು ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 

ಇತ್ತೀಚೆಗೆ ಹೈಕೋರ್ಟ್, ರಾಜಕಾಲುವೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ಸಮೀಕ್ಷೆ ನಡೆಸಿ ಗುರುತಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರ ಸಹಕಾರ ಕೋರಿದೆ. 

ಸಾರ್ವಜನಿಕರು ಅತಿಕ್ರಮಣವಾದ ರಾಜಕಾಲುವೆ ಪ್ರದೇಶವನ್ನು ಸ್ಪಷ್ಟವಾಗಿ ಫೋಟೋ ಸಹಿತ ನಿರ್ದಿಷ್ಟ ಅಧಿಕಾರಿಗಳಿಗೆ ಈ ತಿಂಗಳ 20ರೊಳಗೆ ಕಳುಹಿಸುವಂತೆ ಕೋರಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT