ಸಿಎಂ ಸಿದ್ದರಾಮಯ್ಯ 
ರಾಜ್ಯ

ಎಂಜಿನಿಯರ್‌ಗಳು ಸಮಾಜದ ಬೆನ್ನೆಲುಬು: ಸಿಎಂ ಸಿದ್ದರಾಮಯ್ಯ

ಎಂಜಿನಿಯರ್‌ಗಳು ದೇಶ ಮತ್ತು ಸಮಾಜದ ನಿರ್ಮಾತೃಗಳು, ದೇಶವನ್ನು ಪ್ರಗತಿಯ ದಿಕ್ಕಿನತ್ತ ಕೊಂಡೊಯ್ಯುವವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಎಂಜಿನಿಯರ್‌ಗಳು ದೇಶ ಮತ್ತು ಸಮಾಜದ ನಿರ್ಮಾತೃಗಳು, ದೇಶವನ್ನು ಪ್ರಗತಿಯ ದಿಕ್ಕಿನತ್ತ ಕೊಂಡೊಯ್ಯುವವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಬೆಂಗಳೂರಿನ ಇಂಜಿನಿಯರ್‌ಗಳ ಸಂಸ್ಥೆ (ಭಾರತ) ಶುಕ್ರವಾರ ಆಯೋಜಿಸಿದ್ದ 56ನೇ ಎಂಜಿನಿಯರ್‌ಗಳ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

"ಇಂದು ಇಂಜಿನಿಯರ್‌ಗಳ ದಿನ ಮತ್ತು ವಿಶ್ವ ಪ್ರಜಾಪ್ರಭುತ್ವ ದಿನ (ಸೆಪ್ಟೆಂಬರ್ 15), ಈ ಎರಡರ ಉದ್ದೇಶವು ಉತ್ತಮ ಸಮಾಜವನ್ನು ನಿರ್ಮಿಸುವುದಾಗಿದೆ. ಸರ್ ಎಂ ವಿಶ್ವೇಶ್ವರಯ್ಯನವರು ಭವಿಷ್ಯದ ಸಮಾಜ ಹೇಗಿರಬೇಕು ಎಂಬ ದೃಷ್ಟಿಯನ್ನು ಹೊಂದಿದ್ದರು ಮತ್ತು ನಮ್ಮಲ್ಲೂ ಅದೇ ದೂರದೃಷ್ಟಿ ಇರಬೇಕು. ಇವರು ಮೈಸೂರು ರಾಜರ ಬಳಿ ದಿವಾನರಾಗಿದ್ದ ಕಾರಣದಿಂದಲೇ ಮೈಸೂರಿನ‌ ಅಭಿವೃದ್ಧಿಯಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ ಎಂದು ಹೇಳಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮಾತನಾಡಿ, ಎಂಜಿನಿಯರ್‌ಗಳಿಲ್ಲದೆ ಜಗತ್ತಿಲ್ಲ. ನಮ್ಮ ಸಮಾಜದ ಪ್ರತಿಯೊಂದು ಅಂಶಗಳಲ್ಲಿ ಎಂಜಿನಿಯರ್‌ಗಳು ಅವಿಭಾಜ್ಯ ಪಾತ್ರವನ್ನು ವಹಿಸುತ್ತಾರೆ. ವಿಶ್ವದ ಇತರ ಶಾಲಾ-ಕಾಲೇಜುಗಳಿಗೆ ಸಮಾನವಾದ ಎಂಜಿನಿಯರಿಂಗ್ ಸಂಸ್ಥೆಗಳನ್ನು ನಾವು ವಿನ್ಯಾಸಗೊಳಿಸಬೇಕಾಗಿದೆ ಮತ್ತು ನಿರ್ಮಿಸಬೇಕಾಗಿದೆ ಎಂದು ತಿಳಿಸಿದರು.

ಕಲಾತ್ಮಕ ಕಟ್ಟಡಗಳನ್ನು ನಿರ್ಮಿಸುವ ಕುರಿತು ಮಾತನಾಡಿ, ಎಂಜಿನಿಯರ್‌ಗಳು ಖಾಸಗಿ ಸಂಸ್ಥೆಗಳಿಗೆ ಮಾತ್ರವಲ್ಲದೆ, ಸರ್ಕಾರಿ ಕಟ್ಟಡಗಳು ಮತ್ತು ಯೋಜನೆಗಳಿಗೆ ಉತ್ತಮ ವಿನ್ಯಾಸ ರಚನೆಗಳನ್ನು ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಇಂಜಿನಿಯರ್ ಕ್ಷೇತ್ರಕ್ಕೆ ಅಸಾಧಾರಣ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ 15 ಖ್ಯಾತ ಇಂಜಿನಿಯರ್‌ಗಳನ್ನು ಪುರಸ್ಕರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT