ಪ್ರಣಾವನಂದ ಸ್ವಾಮೀಜಿ 
ರಾಜ್ಯ

ಸಚಿವ ಮಧು ಬಂಗಾರಪ್ಪ ಬೆಂಬಲಿಗರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಆರೋಪ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ತಮಗೆ ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ತಮಗೆ ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಮಧು ಬಂಗಾರಪ್ಪ ಬೆಂಬಲಿಗರಿಂದ ನನಗೆ ಜೀವ ಬೆದರಿಕೆ ಇದೆ. ಹೀಗಾಗಿ ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.

ಬಿ.ಕೆ.ಹರಿಪ್ರಸಾದ್‌ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿದ್ದರಲ್ವಾ. ಸಮುದಾಯಕ್ಕೆ ಮಧು ಬಂಗಾರಪ್ಪ ಅವರ ಕೊಡುಗೆಯೇನು ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ. ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನಾರಾಯಣ ಗುರು ರಥ ಬಂದಾಗ ಒಂದೇ ಒಂದು ಹಾರವನ್ನು ಮಧು ಬಂಗಾರಪ್ಪ ಹಾಕಿದರಾ. ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ ಕೆ ಹರಿಪಸ್ರಾದ್ ಸಹ ಭೂಮಿ ಕಳ್ಳತನ ಮಾಡಿದವರಲ್ಲ ಎಂದಿದ್ದಾರೆ.

ಇನ್ನು ಸ್ವಾಮೀಜಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ಅವರು, ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. ಕಳ್ಳತನ ಮಾಡಿದ್ದರೆ, ತಪ್ಪು ಮಾಡಿದ್ದರೆ ಕಣ್ಣೀರು ಹಾಕೋದು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

SCROLL FOR NEXT