ತಲಕಾಡಿನಲ್ಲಿ ಭತ್ತದ ಕೃಷಿ 
ರಾಜ್ಯ

ಕೈಕೊಟ್ಟ ಮುಂಗಾರು, ಜಲಾಶಯಗಳ ನೀರಿನ ಮಟ್ಟ ಕುಸಿತ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭತ್ತ ಕೃಷಿ ಬಿಟ್ಟ ರೈತರು!

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯತ್ತಿದೆ. ಹೀಗಾಗಿ ಅಣೆಕಟ್ಟುಗಳಲ್ಲಿರುವ ನೀರು ಕೃಷಿ ಮಾಡಲು ಸಾಧ್ಯವಿಲ್ಲ ಎಂಬ ಆತಂಕದಿಂದ ಕಾವೇರಿ ಜಲಾನಯನಪ್ರದೇಶದ ರೈತರು ಭತ್ತದ ಕೃಷಿ ಕೈ ಬಿಟ್ಟಿದ್ದಾರೆ.

ಮೈಸೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯತ್ತಿದೆ. ಹೀಗಾಗಿ ಅಣೆಕಟ್ಟುಗಳಲ್ಲಿರುವ ನೀರು ಕೃಷಿ ಮಾಡಲು ಸಾಧ್ಯವಿಲ್ಲ ಎಂಬ ಆತಂಕದಿಂದ ಕಾವೇರಿ ಜಲಾನಯನಪ್ರದೇಶದ ರೈತರು ಭತ್ತದ ಕೃಷಿ ಕೈ ಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರಿನ ವಿಶ್ವೇಶ್ವರಯ್ಯ ನಾಲೆ, ಫೀಡರ್ ಕಾಲುವೆಗಳನ್ನು, ಹಾಗೂ  ಟಿ.ನರಸೀಪುರದ ತಲಕಾಡು ಮತ್ತು ಕೊಳ್ಳೇಗಾಲ ಭಾಗದ ರೈತರು ಕಬಿನಿ ಜಲಾಶಯವನ್ನು ಅವಲಂಬಿಸಿದ್ದು ಭತ್ತದ ಬೆಳೆ ಬೆಳೆಯದಿರಲು ನಿರ್ಧರಿಸಿದ್ದಾರೆ.

ಜುಲೈ ಅಂತ್ಯದಲ್ಲಿ ಕೆಆರ್‌ಎಸ್ ಜಲಾಶಯದಲ್ಲಿನ ನೀರು 113 ಅಡಿಗಳಿಗೆ ಮತ್ತು ಕಬಿನಿ ಮಟ್ಟವು  2282 ಅಡಿಗಳಿಗೆ ಏರಿದಾಗ ಕೃಷಿ ಚಟುವಟಿಕೆಗಳು ಚುರುಕುಗೊಂಡವು, ಕೆಆರ್ ಎಸ್ ಹಾಗೂ ಕಬಿನಿ ಅಚ್ಚುಕಟ್ಟಿನಲ್ಲಿ ಅರೆಬೆಳೆ ಬೆಳೆಯಲು ತಿಂಗಳಿಗೆ 15 ದಿನ ನೀರು ಕೊಡುವುದಾಗಿ ನೀರಾವರಿ ಸಲಹಾ ಸಮಿತಿ ಭರವಸೆ ನೀಡಿದೆ. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಸರ್ಕಾರ ತಮಿಳುನಾಡಿಗೆ 25 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವುದರೊಂದಿಗೆ ಕೆಆರ್‌ಎಸ್ ಮಟ್ಟ 97.38 ಅಡಿಗಳಿಗೆ ಇಳಿದಿದೆ ಮತ್ತು ಕಬಿನಿ ಮಟ್ಟವು 2276.25 ಅಡಿಗೆ ಇಳಿದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತು ಮದ್ದೂರು ತಾಲೂಕುಗಳಲ್ಲಿ ನೀರು ಬಾರದ ಹಿನ್ನೆಲೆಯಲ್ಲಿ ಭತ್ತ ಮತ್ತು ಇತರ ಕೃಷಿಗೆ ಹಿನ್ನಡೆಯಾಗಿದೆ. ಆದಾಗ್ಯೂ, ಟ್ಯಾಂಕ್‌ಗಳು ಮತ್ತು ನೀರಾವರಿ ಪಂಪ್‌ಸೆಟ್‌ಗಳಲ್ಲಿನ ನೀರನ್ನು ಅವಲಂಬಿಸಿರುವ ಕೆಲವು ಕಡೆ ಭತ್ತದ ನಾಟಿ ಮಾಡಲಾಗಿದೆ.

ಭತ್ತದ ಕೃಷಿಗೆ ಹೆಸರುವಾಸಿಯಾಗಿರುವ ತಲಕಾಡು ಭಾಗದ ರೈತರು ಬೆಳೆಗೆ ನೀರು ಸಿಗುವುದಿಲ್ಲ ಎಂಬ ಆತಂಕದಿಂದ ಭತ್ತದ ಕೃಷಿಯನ್ನು ಕೈ ಬಿಟ್ಟಿದ್ದಾರೆ. ಕೆಲವರು ದ್ವಿದಳ ಧಾನ್ಯಗಳನ್ನು ಬೆಳೆಯಲು ಪ್ರಯತ್ನಿಸಿದರೂ ಅಲ್ಪ ಮಳೆಯಿಂದ ಉತ್ತಮ ಇಳುವರಿ ಸಿಗಲಿಲ್ಲ ಎನ್ನುತ್ತಾರೆ ರೈತ ಪುರುಷೋತ್ತಮ್.

ಕೊಳ್ಳೇಗಾಲ ತಾಲೂಕಿನ ಸಿಸಳೆ, ಮುಗೂರು, ಹಲವೆಡೆ ರೈತರು ಬೆಳೆ ಉಳಿಸಿಕೊಳ್ಳಲು ಗಗನದತ್ತ ಮುಖ ಮಾಡುತ್ತಿದ್ದರೆ, ಫೀಡರ್ ಕಾಲುವೆಗಳಿಂದ ಸಾಕಷ್ಟು ನೀರಿಲ್ಲದೆ ಬೆಳೆದು ನಿಂತಿರುವ ಕಬ್ಬಿನ ಬೆಳೆಗಳು ಕೂಡ ಬಾಡುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT