ಸಂಗ್ರಹ ಚಿತ್ರ 
ರಾಜ್ಯ

ಗಣೇಶ್‌ ಚತುರ್ಥಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ

ಗಣೇಶ್‌ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ.

ಬೆಂಗಳೂರು: ಗಣೇಶ್‌ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ.

ಆದೇಶದಲ್ಲಿ ಗಣೇಶ್‌ ಚತುರ್ಥಿ ಹಬ್ಬದ ಹಿನ್ನೆಲೆ 18-09-2023ರಂದು ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.

ಗಣಪತಿ ವಿಸರ್ಜನೆಗೆ ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್‌ಗಳ ಸ್ಥಾಪನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು ಹಾಗೂ 418 ತಾತ್ಕಾಲಿಕ  ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.

ಸದರಿ ವ್ಯವಸ್ಥೆಯ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅದರ ವಿವರಗಳಿಗಾಗಿ ವೆಬ್ ಸೈಟ್ https://apps.bbmpgov.in/ganesh2023/ ನಲ್ಲಿ ಅಥವಾ ಬಿಬಿಎಂಪಿ ಸಹಾಯವಾಣಿ 1533ಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ. ಸದರಿ ಮಾಹಿತಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳಕೆ ಮಾಡಿಕೊಳ್ಳಬಹುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT