ಸಂಗ್ರಹ ಚಿತ್ರ 
ರಾಜ್ಯ

ನಿಫಾ ವೈರಸ್ ಭೀತಿ: ಕೇರಳ ಪ್ರವಾಸಿಗರಿಗೆ ನಿಷೇಧ ಹೇರಿದ ಚಿಕ್ಕಮಗಳೂರು, ಎಲ್ಲೆಡೆ ಕಟ್ಟೆಚ್ಚರ

ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಚಿಕ್ಕಮಗಳೂರು: ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಚಿಕ್ಕಮಗಳೂರು ಜಿಲ್ಲಾಡಳಿತ ಮಂಡಳಿ ಮತ್ತು ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಹರಡುವುದನ್ನು ತಡೆಯಲು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕೇರಳ ಮಲೆನಾಡು ಪ್ರದೇಶ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ಜಿಲ್ಲೆಯಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೇರಳ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಕೇರಳ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಅವಕಾಶ ನಿರಾಕರಿಸುವಂತೆ ಜಿಲ್ಲೆಯಲ್ಲಿರುವ ಎಲ್ಲಾ ರೆಸಾರ್ಟ್'ಗಳು, ಹೋಂಸ್ಟೇಗಳು ಮತ್ತು ಹೋಟೆಲ್ ಮಾಲೀಕರಿಗೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟಗಳು ವಿವಿಧ ರಾಜ್ಯಗಳಿಂದ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದ್ದು, ಪ್ಯಾಕೇಜ್ ಏಜೆನ್ಸಿಗಳ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಮತ್ತೊಂದೆಡೆ, ಬಾವಲಿಗಳು ವೈರಸ್‌ನ ವಾಹಕಗಳಾಗಿರುವುದರಿಂದ, ಸ್ಥಳೀಯ ನಿವಾಸಿಗಳು ಮರಗಳಲ್ಲಿ ವಾಸಿಸುವ ಬಾವಲಿಗಳನ್ನು ಸ್ಥಳಾಂತರಿಸುವಂತೆ ಆಡಳಿತ ಮಂಡಳಿಯನ್ನು ಒತ್ತಾಯಿಸುತ್ತಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸುಂದರೇಶ್ ಮಾತನಾಡಿ, ನಾಗರಿಕರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಲು ಸೋಂಕು ತಡೆಗಟ್ಟಲು ಕೈಗೊಳ್ಳಲಾಗಿರುವ ಕ್ರಮಗಳು ಹಾಗೂ ಈ ಕುರಿತು ಶಿಕ್ಷಣವನ್ನು ಜನರಿಗೆ ನೀಡುವುದು ಅಗತ್ಯವಿದೆ ಎಂದು ಹೇಳಿದ್ದಾರೆ.

ಮಲ್ಲೇಗೌಡ ಜಿಲ್ಲಾ ಜನರಲ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗದ ಕಾರಣ ಆತಂಕ ಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮವಾಗಿ ವಿಶೇಷ ವಾರ್ಡ್‌ನಲ್ಲಿ ವೆಂಟಿಲೇಟರ್ ಮತ್ತು ಆಮ್ಲಜನಕದ 6 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಬಾವಲಿಗಳು ಅರ್ಧ ಕಚ್ಚಿದ ಹಣ್ಣುಗಳನ್ನು ಜನರು ಸೇವನೆ ಮಾಡಬಾರದು. ಒಂದು ವೇಳೆ ಅನುಮಾನಗಳಿದ್ದರೆ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT