ಅಂಬ್ರೇಶ ಮೇಲಪ್ಪನೋರ 
ರಾಜ್ಯ

ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ರೈತ ಸಾವು

ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ಕೀಟನಾಶಕ ತಗುಲಿ ಯುವ ರೈತನೋರ್ವ ಮೃತಪಟ್ಟ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸ್ ಪೇಟೆ ಗ್ರಾಮದಲ್ಲಿ ವರದಿಯಾಗಿದೆ.

ಕಲಬುರಗಿ: ಹತ್ತಿ ಬೆಳೆಗೆ ಕೀಟನಾಶಕ ಸಿಂಪರಣೆ ಮಾಡುವ ವೇಳೆ ಕೀಟನಾಶಕ ತಗುಲಿ ಯುವ ರೈತನೋರ್ವ ಮೃತಪಟ್ಟ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರ್ಕಸ್ ಪೇಟೆ ಗ್ರಾಮದಲ್ಲಿ ವರದಿಯಾಗಿದೆ.

ಅಂಬ್ರೇಶ ಮೇಲಪ್ಪನೋರ (26) ಮೃತ ರೈತ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿರುವ ತನ್ನ 3 ಎಕರೆ ಜಮೀನಿನಲ್ಲಿ ಬೆಳೆಯಲಾದ ಹತ್ತಿ ಬೆಳೆಗೆ ಕ್ರಿಮಿನಾಶಕ ತೈಲ ಸಿಂಪಡಣೆ ಮಾಡುತಿದ್ದರು.

ವಿಷಕಾರಿ ತೈಲ ಉಸಿರಾಟದ ಮೂಲಕ ದೇಹ ಸೇರಿ ರೈತ ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಸಮೀಪದ ಕೊಲ್ಲೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಯಾದಗಿರಿ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದಾರೆ. ಅರೊಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಮತ್ತೆ ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ವರ್ಷವಷ್ಟೇ ವಿವಾಹವಾಗಿತ್ತು.  ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖಂಡ ಭೀಮರೆಡ್ಡಿಗೌಡ ಕುರಾಳ ಒತ್ತಾಯಿಸಿದ್ದಾರೆ. ಕೃಷಿ ಇಲಾಖೆ ಶಿಫಾರಸು ಮಾಡದ ಹಾಗೂ ಅತಿಹೆಚ್ಚಿನ ರಾಸಾಯನಿಕ ಅಂಶಗಳು ಇರುವ ಕೀಟನಾಶಕಗಳನ್ನು ಎಲ್ಲೆಡೆ ಮಾರಾಟ ಮಾಡಲಾಗುತ್ತಿದೆ. ಇವುಗಳ ಬಳಕೆಯಿಂದ ರೈತರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು ಅನಧಿಕೃತ ಕೀಟನಾಶಕ ಪೂರೈಕೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ತರಕಸ್ಪೇಟ್ ಗ್ರಾಮದ ಮುಖಂಡ ನಂದಾರೆಡ್ಡಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT